6:59 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಶಿರ್ವ: ಎರಡು ಬೈಕ್ ಪರಸ್ಪರ ಡಿಕ್ಕಿ; ಹೇರೂರು ನಿವಾಸಿ ಗೃಹಿಣಿ ಸ್ಥಳದಲ್ಲೇ ಸಾವು

14/11/2021, 08:55

ಶಿರ್ವ( reporterkarnataka.com): ಎರಡು ದ್ವಿಚಕ್ರ ವಾಹನಗಳ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ‌ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಭಾಷ್ ನಗರದ ಕುರ್ಕಾಲು ಜಂಕ್ಷನ್ ನಲ್ಲಿ ನಡೆದಿದೆ.

ಮೃತರನ್ನು ಹೇರೂರು ಗ್ರಾಮದ ನಿವಾಸಿ ಶರ್ಮಿಳಾ (42) ಎಂದು ಗುರುತಿಸಲಾಗಿದೆ. ಇವರು ಉಡುಪಿ ವಿದ್ಯೋದಯ ಶಾಲೆಯಲ್ಲಿ ಪರಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಶರ್ಮಿಳಾ ಅವರು ಶನಿವಾರ ಬೆಳಿಗ್ಗೆ ತಮ್ಮ ಪತಿ ಸುರೇಶ್ ದೇವಾಡಿಗ ಅವರೊಂದಿಗೆ ಬೈಕ್ ನಲ್ಲಿ ಹೇರೂರಿನಿಂದ ಕಟಪಾಡಿ ಕಡೆಗೆ ಹೋಗುತ್ತಿದ್ದರು. ಕುರ್ಕಾಲು ಜಂಕ್ಷನ್ ಬಳಿ ಈ ಅಪಘಾತ ನಡೆದಿದೆ. ಎದುರಿನಿಂದ ಬಂದ ಬೈಕ್ ಸವಾರ ಯಾವುದೇ ಸೂಚನೆ ನೀಡದೆ ಒಮ್ಮೆಲೆ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಬೈಕ್ ನಿಯಂತ್ರಣ ಕಳೆದುಕೊಂಡು ಎದುರಿನ ಬೈಕ್ ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.

ಅಪಘಾತವಾದ ರಭಸಕ್ಕೆ ಶರ್ಮಿಳಾ ಅವರು ರಸ್ತೆಗೆ ಬಿದ್ದಿದ್ದು, ಇದರಿಂದ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು