6:34 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು…

ಇತ್ತೀಚಿನ ಸುದ್ದಿ

ಭಾರತವು ಮಧುಮೇಹದ ರಾಜಧಾನಿಯೇ?: ಇದರ ನಿಯಂತ್ರಣಕ್ಕೆ ಏನು ಮಾಡಬೇಕು? ಮುಂದಕ್ಕೆ ಓದಿ  

14/11/2021, 09:19

ಕಾರ್ಕಳ(reporterkarnataka.com):  ಮಧುಮೇಹ ಕಾಯಿಲೆ ಪ್ರಾರಂಭದಲ್ಲಿ ಯಾವುದೇ ಲಕ್ಷಣಗಳನ್ನು ತೋರಿಸುವುದಿಲ್ಲ, ಇದನ್ನು ಪತ್ತೆಹಚ್ಚಲು ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ. ನಿಯಮಿತವಾದ ಆಹಾರ ಸೇವನೆ,  ನಿಯಮಿತವಾದ ವ್ಯಾಯಾಮ ಮತ್ತು ಮನಸ್ಸಿನ ನಿಗ್ರಹದಿಂದ ಮಧುಮೇಹವನ್ನು ಹತೋಟಿಯಲ್ಲಿಡಬಹುದು ಎಂದು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಇದರ ಸಭಾಪತಿಯಾದ ಡಾ.ಕೆ. ರಾಮಚಂದ್ರ ಜೋಶಿ ಹೇಳಿದರು.

ಅವರು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕ, ಭಾರತೀಯ ವೈದ್ಯಕೀಯ ಸಂಘ ಕಾರ್ಕಳ ಮತ್ತು ಶ್ರೀ ಭುವನೇಂದ್ರ ಮೆಡಿಕಲ್ ಮಿಷನ್  ಇವರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಇದರ ಕಾರ್ಯಾಲಯದಲ್ಲಿ ನಡೆದ “ವಿಶ್ವ ಮಧುಮೇಹ ದಿನಾಚರಣೆ 2021″ಇದರ ಅಂಗವಾಗಿ ನಡೆದ ಉಚಿತ ಮಧುಮೇಹ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ  ಇಸ್ರೋದ ನಿವೃತ್ತ ವಿಜ್ಞಾನಿ ಇ. ಜನಾರ್ಧನ್ ಅಧಿಕ ಮಧುಮೇಹಿಗಳಿರುವ ನಮ್ಮ ದೇಶದಲ್ಲಿ ಮಧುಮೇಹಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಅರಿತು ಸೂಕ್ತ ಔಷಧಿಗಳನ್ನು ನೀಡುವ ವ್ಯವಸ್ಥೆಯಾಗಬೇಕು ಎಂದರು.

ಮುಖ್ಯಅತಿಥಿ ಭಾರತೀಯ ವೈದ್ಯಕೀಯ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಡಾ. ಅನಂತ ಕಾಮತ್ ಮಾತನಾಡುತ್ತಾ ಭಾರತವು ಮಧುಮೇಹದ ರಾಜಧಾನಿಯಾಗಿದೆ.  ಮಧುಮೇಹ ರೋಗಿಗಳು ಮಿತವಾದ ಮತ್ತು ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು ಎಂದರು.

ಶ್ರೀ ಭುವನೇಂದ್ರ ವೈದ್ಯಕೀಯ ಮಿಷನ್ ಇದರ ಅಧ್ಯಕ್ಷ ಗಣೇಶ್ ಕಾಮತ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಆಯೋಜಿಸಲಾದ ಸ್ಪೆಷಲಿಸ್ಟ್ ವೈದ್ಯಕೀಯ ಶಿಬಿರದಲ್ಲಿ 60ಕ್ಕೂ ಹೆಚ್ಚು ಜನರು ಭಾಗವಹಿಸಿದ್ದು ಎಲ್ಲರಿಗೂ Blood sugar, Glyco Hb%,  BP, ECG, ಹಾಗೂ Serum Uric acid ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು.

ಶಿವಕುಮಾರ್ ಪ್ರಾರ್ಥಿಸಿದರು. ಶೇಖರ್ ಎಚ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಸಂತ್ ಎಂ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು