8:23 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ…

ಇತ್ತೀಚಿನ ಸುದ್ದಿ

ಭಾರತವು ಮಧುಮೇಹದ ರಾಜಧಾನಿಯೇ?: ಇದರ ನಿಯಂತ್ರಣಕ್ಕೆ ಏನು ಮಾಡಬೇಕು? ಮುಂದಕ್ಕೆ ಓದಿ  

14/11/2021, 09:19

ಕಾರ್ಕಳ(reporterkarnataka.com):  ಮಧುಮೇಹ ಕಾಯಿಲೆ ಪ್ರಾರಂಭದಲ್ಲಿ ಯಾವುದೇ ಲಕ್ಷಣಗಳನ್ನು ತೋರಿಸುವುದಿಲ್ಲ, ಇದನ್ನು ಪತ್ತೆಹಚ್ಚಲು ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ. ನಿಯಮಿತವಾದ ಆಹಾರ ಸೇವನೆ,  ನಿಯಮಿತವಾದ ವ್ಯಾಯಾಮ ಮತ್ತು ಮನಸ್ಸಿನ ನಿಗ್ರಹದಿಂದ ಮಧುಮೇಹವನ್ನು ಹತೋಟಿಯಲ್ಲಿಡಬಹುದು ಎಂದು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಇದರ ಸಭಾಪತಿಯಾದ ಡಾ.ಕೆ. ರಾಮಚಂದ್ರ ಜೋಶಿ ಹೇಳಿದರು.

ಅವರು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕ, ಭಾರತೀಯ ವೈದ್ಯಕೀಯ ಸಂಘ ಕಾರ್ಕಳ ಮತ್ತು ಶ್ರೀ ಭುವನೇಂದ್ರ ಮೆಡಿಕಲ್ ಮಿಷನ್  ಇವರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಇದರ ಕಾರ್ಯಾಲಯದಲ್ಲಿ ನಡೆದ “ವಿಶ್ವ ಮಧುಮೇಹ ದಿನಾಚರಣೆ 2021″ಇದರ ಅಂಗವಾಗಿ ನಡೆದ ಉಚಿತ ಮಧುಮೇಹ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ  ಇಸ್ರೋದ ನಿವೃತ್ತ ವಿಜ್ಞಾನಿ ಇ. ಜನಾರ್ಧನ್ ಅಧಿಕ ಮಧುಮೇಹಿಗಳಿರುವ ನಮ್ಮ ದೇಶದಲ್ಲಿ ಮಧುಮೇಹಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಅರಿತು ಸೂಕ್ತ ಔಷಧಿಗಳನ್ನು ನೀಡುವ ವ್ಯವಸ್ಥೆಯಾಗಬೇಕು ಎಂದರು.

ಮುಖ್ಯಅತಿಥಿ ಭಾರತೀಯ ವೈದ್ಯಕೀಯ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಡಾ. ಅನಂತ ಕಾಮತ್ ಮಾತನಾಡುತ್ತಾ ಭಾರತವು ಮಧುಮೇಹದ ರಾಜಧಾನಿಯಾಗಿದೆ.  ಮಧುಮೇಹ ರೋಗಿಗಳು ಮಿತವಾದ ಮತ್ತು ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು ಎಂದರು.

ಶ್ರೀ ಭುವನೇಂದ್ರ ವೈದ್ಯಕೀಯ ಮಿಷನ್ ಇದರ ಅಧ್ಯಕ್ಷ ಗಣೇಶ್ ಕಾಮತ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಆಯೋಜಿಸಲಾದ ಸ್ಪೆಷಲಿಸ್ಟ್ ವೈದ್ಯಕೀಯ ಶಿಬಿರದಲ್ಲಿ 60ಕ್ಕೂ ಹೆಚ್ಚು ಜನರು ಭಾಗವಹಿಸಿದ್ದು ಎಲ್ಲರಿಗೂ Blood sugar, Glyco Hb%,  BP, ECG, ಹಾಗೂ Serum Uric acid ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು.

ಶಿವಕುಮಾರ್ ಪ್ರಾರ್ಥಿಸಿದರು. ಶೇಖರ್ ಎಚ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಸಂತ್ ಎಂ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು