1:40 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಹೆಚ್ಚುತ್ತಿರುವ ಹುಲಿ ದಾಳಿ: ಸಾರ್ವಜನಿಕರಲ್ಲಿ ಭಯದ ವಾತಾವರಣ

14/11/2021, 13:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹುಲಿ ದಾಳಿಗೆ ಮತ್ತೊಂದು ಕರು ಬಲಿಯಾದ ಘಟನೆ  ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹೆಗ್ಗುಡ್ಲು ನಲ್ಲಿ ನಡೆದಿದೆ.ಹೆಗ್ಗುಡ್ಲು ಗ್ರಾಮದ ರತ್ನಮ್ಮ ಎಂಬ ಮಹಿಳೆಗೆ ಸೇರಿದ್ದ ಕರುವಾಗಿದೆ. ಜಮೀನಿನಲ್ಲಿದ್ದ ಕರುವಿನ ಮೇಲೆ ಹುಲಿ ದಾಳಿ ಮಾಡಿದೆ. 

ಕಳೆದ ಎರಡು ಮೂರು ವರ್ಷ ಗಳಿಂದ ಮೂಡಿಗೆರೆ ತಾಲೂಕಿನ ಬಿ.ಹೊಸಹಳ್ಳಿ, ಹೆಗ್ಗುಡ್ಲು, ಭಾರತಿ ಬೈಲ್, ಹೊಕ್ಕಳ್ಳಿ, ಕುಂದೂರು, ಮತ್ತಿಕಟ್ಟೆ,ಸುತ್ತಾ ಮುತ್ತಾ ಗ್ರಾಮಗಳಲ್ಲಿ ಹಸುಗಳ ಮೇಲೆ  ದಾಳಿ ಮಾಡುತ್ತಿದ್ದ ಘಟನೆ ನಡೆಯುತ್ತಿದೆ. ಕಳೆದ ಮೂರು ನಾಲ್ಕು ವರ್ಷಗಳಿಂದ ಹಲವಾರು ಹಸುಗಳು ಹುಲಿಗೆ ಆಹಾರವಾಗಿವೆ. 

ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ.
ಆದಷ್ಟು ಬೇಗ ಅರಣ್ಯ ಅಧಿಕಾರಿಗಳು ಹುಲಿ ಸೆರೆ ಹಿಡಿಯದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಬಣಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಎಚ್ಚರಿಕೆ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು