11:28 PM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಣೆ

29/05/2021, 21:00

ಮಂಗಳೂರು(reporterkarnataka news):

ಕೋವಿಡ್ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಬಂದರು ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ಮತ್ತು ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ವತಿಯಿಂದ ಶಾಸಕ ಡಿ. ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಪೋಲಿಸ್ ಇಲಾಖೆ ಜನರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದೆ. ಕೋವಿಡ್ ವಾರಿಯರ್ಸ್‌ ಆಗಿ ದುಡಿಯುತ್ತಿರುವ ಅವರಿಗೆ ನಾವೆಲ್ಲರೂ ಧೈರ್ಯ ತುಂಬಬೇಕಿದೆ. ಆ ನಿಟ್ಟಿನಲ್ಲಿ ಮಹಾಲಕ್ಷ್ಮಿ ಜ್ಯುವೆಲರ್ಸ್ ಹಾಗೂ ಕೆಎನ್ಎಸ್ ಬಿ ಫಲ್ಗುಣಿ ಟ್ಯಾಕ್ಸ್ ಟೇಲ್ಸ್ ಅವರು ರೈನ್ ಕೋಟ್ ಗಳನ್ನು ನೀಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮನೆ ಮಂದಿಯನ್ನೆಲ್ಲ ಬಿಟ್ಟು ದುಡಿಯುವ‌ ಪೋಲಿಸರಿಗೆ ಈ ಮೂಲಕ ಗೌರವ‌ ಸಲ್ಲಿಸಿದಂತಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಪೂರ್ಣಿಮಾ, ಸೆಂಟ್ರಲ್ ಉಪ ವಿಭಾಗದ ಎಸಿಪಿಪಿ ಎ. ಹೆಗಡೆ, ಬಂದರು ಠಾಣೆ ಇನ್ಸ್ಪೆಕ್ಟರ್ ಗೋವಿಂದ ರಾಜು ಪಿ, ಬಂದರು ಠಾಣೆ ಉಪನಿರೀಕ್ಷಕರು, ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ನ ರವೀಂದ್ರ ಎಂ ನಿಕಮ್, ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ನ ಮನೋಜ್ ಕುಮಾರ್, ದೇವಿ ಚರಣ್ ಶೆಟ್ಟಿ, ರಮೇಶ್ ಹೆಗ್ಡೆ, ಮುರಳಿಧರ್ ನಾಯಕ್, ಗಿರೀಶ್ ಕುಮಾರ್, ಗಣೇಶ್ ನಾಯಕ್, ಮತ್ತು ಪ್ರಮೋದ್ ಆಚಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು