5:34 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಣೆ

29/05/2021, 21:00

ಮಂಗಳೂರು(reporterkarnataka news):

ಕೋವಿಡ್ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಬಂದರು ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ಮತ್ತು ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ವತಿಯಿಂದ ಶಾಸಕ ಡಿ. ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಪೋಲಿಸ್ ಇಲಾಖೆ ಜನರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದೆ. ಕೋವಿಡ್ ವಾರಿಯರ್ಸ್‌ ಆಗಿ ದುಡಿಯುತ್ತಿರುವ ಅವರಿಗೆ ನಾವೆಲ್ಲರೂ ಧೈರ್ಯ ತುಂಬಬೇಕಿದೆ. ಆ ನಿಟ್ಟಿನಲ್ಲಿ ಮಹಾಲಕ್ಷ್ಮಿ ಜ್ಯುವೆಲರ್ಸ್ ಹಾಗೂ ಕೆಎನ್ಎಸ್ ಬಿ ಫಲ್ಗುಣಿ ಟ್ಯಾಕ್ಸ್ ಟೇಲ್ಸ್ ಅವರು ರೈನ್ ಕೋಟ್ ಗಳನ್ನು ನೀಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮನೆ ಮಂದಿಯನ್ನೆಲ್ಲ ಬಿಟ್ಟು ದುಡಿಯುವ‌ ಪೋಲಿಸರಿಗೆ ಈ ಮೂಲಕ ಗೌರವ‌ ಸಲ್ಲಿಸಿದಂತಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಪೂರ್ಣಿಮಾ, ಸೆಂಟ್ರಲ್ ಉಪ ವಿಭಾಗದ ಎಸಿಪಿಪಿ ಎ. ಹೆಗಡೆ, ಬಂದರು ಠಾಣೆ ಇನ್ಸ್ಪೆಕ್ಟರ್ ಗೋವಿಂದ ರಾಜು ಪಿ, ಬಂದರು ಠಾಣೆ ಉಪನಿರೀಕ್ಷಕರು, ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ನ ರವೀಂದ್ರ ಎಂ ನಿಕಮ್, ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ನ ಮನೋಜ್ ಕುಮಾರ್, ದೇವಿ ಚರಣ್ ಶೆಟ್ಟಿ, ರಮೇಶ್ ಹೆಗ್ಡೆ, ಮುರಳಿಧರ್ ನಾಯಕ್, ಗಿರೀಶ್ ಕುಮಾರ್, ಗಣೇಶ್ ನಾಯಕ್, ಮತ್ತು ಪ್ರಮೋದ್ ಆಚಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು