10:33 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಹಸಿರು ಉಸಿರು: ಐಎಸ್ ಸಿ ಮಂಗಳೂರು ಲೀಜೆನ್ ನಿಂದ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ

14/11/2021, 18:16

ಮಂಗಳೂರು( reporterkarnataka.com):

ಇಂಡಿಯನ್ ಸೀನಿಯರ್ ಚೇಂಬರ್ ಮಂಗಳೂರು ಲೀಜೆನ್, ಮಂಗಳೂರು ಬ್ಲೂಂ ಹಾಗೂ ಲಯನ್ಸ್ ಕ್ಲಬ್ ಬಲ್ಮಠ ಇದರ ಸಂಯುಕ್ತಾಶ್ರಯದಲ್ಲಿ ನಗರದ ಅಶೋಕನಗರ ಅಂಚೆ ಕಚೇರಿಗೆ ಹಾದು ಹೋಗುವ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ ಜರುಗಿತು.

ಮುಂಜಾನೆ 7.30 ರಿಂದ 9.30ರ ವರೆಗೆ ಈ ಕಾರ್ಯಕ್ರಮ ನಡೆದಿದ್ದು 105 ಗಿಡಗಳನ್ನು ನೆಟ್ಟು ನೀರುಣಿಸಲಾಯಿತು.  

ಗಿಡ ನೆಡುವ ಕಾರ್ಯಕ್ರಮದ ಮುಂದಾಳತ್ವವನ್ನು ಇಂಡಿಯನ್ ಸೀನಿಯರ್ ಚೇಂಬರ್ ಅಧ್ಯಕ್ಷ

ಹರಿಪ್ರಸಾದ್ ರೈ  ಅವರು ವಹಿಸಿ ಎಲ್ಲರನ್ನು ಹುರಿದುಂಬಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. 85ರ ಹರೆಯದ ಪರಿಸರವಾದಿ ಕೃಷ್ಣಪ್ಪ ಅವರು 

ಅತ್ಯಂತ ಉತ್ಸಾಹದಿಂದ ಗುಂಡಿಯನ್ನು ತೋಡಿ ಗಿಡವನ್ನು ನೆಟ್ಟು ನಮಗೆಲ್ಲ ಮಾದರಿಯಾದರು. ಗಿಡ ನೆಡುವ ಯಾವುದೇ ಕಾರ್ಯಕ್ರಮವಿದ್ದರೆ ಅಲ್ಲಿ ಅವರು ಹಾಜರಾಗಿ ತಮ್ಮ ಕೈಯ್ಯಾರೆ ಗಿಡವನ್ನು ನೆಡುತ್ತಾರೆ.  ಅವರ ಈ ಉತ್ಸಾಹವನ್ನು ನೋಡಿದಾಗ ಅವರಿಗೆ ಪರಿಸರದ ಮೇಲಿನ ಕಾಳಜಿ ಅರ್ಥವಾಗುತ್ತದೆ. ಮಂಗಳೂರಿನವರಾದ ಇವರನ್ನು ಸರಕಾರವು ಗುರುತಿಸಿ ಈ ಹಿರಿ ಜೀವವನ್ನು ಗೌರವಿಸುವುದು ಅತೀ ಮುಖ್ಯ. 

ಇಂದಿನ ಈ ಕಾರ್ಯಕ್ರಮಕ್ಕೆ ಗಿರಿಜಾ ಟ್ರಸ್ಟ್‌ ನವರು ಸಹಕಾರ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು