7:53 PM Saturday27 - April 2024
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ

ಇತ್ತೀಚಿನ ಸುದ್ದಿ

ಹಸಿರು ಉಸಿರು: ಐಎಸ್ ಸಿ ಮಂಗಳೂರು ಲೀಜೆನ್ ನಿಂದ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ

14/11/2021, 18:16

ಮಂಗಳೂರು( reporterkarnataka.com):

ಇಂಡಿಯನ್ ಸೀನಿಯರ್ ಚೇಂಬರ್ ಮಂಗಳೂರು ಲೀಜೆನ್, ಮಂಗಳೂರು ಬ್ಲೂಂ ಹಾಗೂ ಲಯನ್ಸ್ ಕ್ಲಬ್ ಬಲ್ಮಠ ಇದರ ಸಂಯುಕ್ತಾಶ್ರಯದಲ್ಲಿ ನಗರದ ಅಶೋಕನಗರ ಅಂಚೆ ಕಚೇರಿಗೆ ಹಾದು ಹೋಗುವ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ ಜರುಗಿತು.

ಮುಂಜಾನೆ 7.30 ರಿಂದ 9.30ರ ವರೆಗೆ ಈ ಕಾರ್ಯಕ್ರಮ ನಡೆದಿದ್ದು 105 ಗಿಡಗಳನ್ನು ನೆಟ್ಟು ನೀರುಣಿಸಲಾಯಿತು.  

ಗಿಡ ನೆಡುವ ಕಾರ್ಯಕ್ರಮದ ಮುಂದಾಳತ್ವವನ್ನು ಇಂಡಿಯನ್ ಸೀನಿಯರ್ ಚೇಂಬರ್ ಅಧ್ಯಕ್ಷ

ಹರಿಪ್ರಸಾದ್ ರೈ  ಅವರು ವಹಿಸಿ ಎಲ್ಲರನ್ನು ಹುರಿದುಂಬಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. 85ರ ಹರೆಯದ ಪರಿಸರವಾದಿ ಕೃಷ್ಣಪ್ಪ ಅವರು 

ಅತ್ಯಂತ ಉತ್ಸಾಹದಿಂದ ಗುಂಡಿಯನ್ನು ತೋಡಿ ಗಿಡವನ್ನು ನೆಟ್ಟು ನಮಗೆಲ್ಲ ಮಾದರಿಯಾದರು. ಗಿಡ ನೆಡುವ ಯಾವುದೇ ಕಾರ್ಯಕ್ರಮವಿದ್ದರೆ ಅಲ್ಲಿ ಅವರು ಹಾಜರಾಗಿ ತಮ್ಮ ಕೈಯ್ಯಾರೆ ಗಿಡವನ್ನು ನೆಡುತ್ತಾರೆ.  ಅವರ ಈ ಉತ್ಸಾಹವನ್ನು ನೋಡಿದಾಗ ಅವರಿಗೆ ಪರಿಸರದ ಮೇಲಿನ ಕಾಳಜಿ ಅರ್ಥವಾಗುತ್ತದೆ. ಮಂಗಳೂರಿನವರಾದ ಇವರನ್ನು ಸರಕಾರವು ಗುರುತಿಸಿ ಈ ಹಿರಿ ಜೀವವನ್ನು ಗೌರವಿಸುವುದು ಅತೀ ಮುಖ್ಯ. 

ಇಂದಿನ ಈ ಕಾರ್ಯಕ್ರಮಕ್ಕೆ ಗಿರಿಜಾ ಟ್ರಸ್ಟ್‌ ನವರು ಸಹಕಾರ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು