5:39 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಮಲೆನಾಡಿನ ಭೋಜನ ಸವಿದ ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ 

15/11/2021, 10:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಪ್ರಖ್ಯಾತ ಹಾಸ್ಯ ನಟ, ಕನ್ನಡದ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಟೆನಿಸ್ ಕೃಷ್ಣ ಜಿಲ್ಲೆಯ ಮೂಡಿಗೆರೆಗೆ ಭಾನುವಾರ ಭೇಟಿ ನೀಡಿದ್ದರು. 

ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು ಮೂಡಿಗೆರೆ ಮಾರ್ಗವಾಗಿ ಹಿಂತಿರುಗಿ ಬರುವಾಗ ಕಾಫಿನಾಡಿನ ಬೆಟ್ಟಗುಡ್ಡಗಳ ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುತ್ತಾ ಬಂದರು. ಮಧ್ಯಾಹ್ನ ಮೂಡಿಗೆರೆ ಪಟ್ಟಣಕ್ಕೆ ಆಗಮಿಸಿ ಶತಮಾನದಷ್ಟು ಹಳೆಯ ಮನೆಯಲ್ಲಿ ಪ್ರಾರಂಭಿಸಲಾಗಿರುವ ಖಲೀಲ್ಸ್ ಕಿಚನ್ಸ್ ಹೊಟೇಲಿಗೆ ಭೇಟಿ ನೀಡಿ ಭೋಜನ ಸವಿದರು. ಮಲೆನಾಡು-ಕರಾವಳಿ ಭಾಗದ ವಿಶೇಷ ಖಾದ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಲೆಗೆ ಶ್ವೇತವಸ್ತ್ರ ಕಟ್ಟಿಕೊಂಡಿದ್ದ ಟೆನಿಸ್ ಕೃಷ್ಣ ವಿಶೇಷವಾಗಿ ಎಲ್ಲರ ಗಮನ ಸೆಳೆದರು.  

ಟೆನಿಸ್ ಕೃಷ್ಣ ಹಿಂದೆ ಚಿತ್ರರಂಗದ ದೊಡ್ಡ ಸ್ಟಾರ್ ನಟರಾಗಿದ್ದ ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಸಹಿತ ಹಲವಾರು ನಟರ ಜೊತೆ ಹಾಸ್ಯ ನಟನಾಗಿ ಅಭಿನಯಿಸಿ ಕನ್ನಡಿಗರಿಗೆ ಚಿರಪರಿಚಿತರಾದವರು.

ಇತ್ತೀಚಿನ ಸುದ್ದಿ

ಜಾಹೀರಾತು