9:16 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಮಲೆನಾಡಿನ ಭೋಜನ ಸವಿದ ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ 

15/11/2021, 10:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಪ್ರಖ್ಯಾತ ಹಾಸ್ಯ ನಟ, ಕನ್ನಡದ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಟೆನಿಸ್ ಕೃಷ್ಣ ಜಿಲ್ಲೆಯ ಮೂಡಿಗೆರೆಗೆ ಭಾನುವಾರ ಭೇಟಿ ನೀಡಿದ್ದರು. 

ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು ಮೂಡಿಗೆರೆ ಮಾರ್ಗವಾಗಿ ಹಿಂತಿರುಗಿ ಬರುವಾಗ ಕಾಫಿನಾಡಿನ ಬೆಟ್ಟಗುಡ್ಡಗಳ ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುತ್ತಾ ಬಂದರು. ಮಧ್ಯಾಹ್ನ ಮೂಡಿಗೆರೆ ಪಟ್ಟಣಕ್ಕೆ ಆಗಮಿಸಿ ಶತಮಾನದಷ್ಟು ಹಳೆಯ ಮನೆಯಲ್ಲಿ ಪ್ರಾರಂಭಿಸಲಾಗಿರುವ ಖಲೀಲ್ಸ್ ಕಿಚನ್ಸ್ ಹೊಟೇಲಿಗೆ ಭೇಟಿ ನೀಡಿ ಭೋಜನ ಸವಿದರು. ಮಲೆನಾಡು-ಕರಾವಳಿ ಭಾಗದ ವಿಶೇಷ ಖಾದ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಲೆಗೆ ಶ್ವೇತವಸ್ತ್ರ ಕಟ್ಟಿಕೊಂಡಿದ್ದ ಟೆನಿಸ್ ಕೃಷ್ಣ ವಿಶೇಷವಾಗಿ ಎಲ್ಲರ ಗಮನ ಸೆಳೆದರು.  

ಟೆನಿಸ್ ಕೃಷ್ಣ ಹಿಂದೆ ಚಿತ್ರರಂಗದ ದೊಡ್ಡ ಸ್ಟಾರ್ ನಟರಾಗಿದ್ದ ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಸಹಿತ ಹಲವಾರು ನಟರ ಜೊತೆ ಹಾಸ್ಯ ನಟನಾಗಿ ಅಭಿನಯಿಸಿ ಕನ್ನಡಿಗರಿಗೆ ಚಿರಪರಿಚಿತರಾದವರು.

ಇತ್ತೀಚಿನ ಸುದ್ದಿ

ಜಾಹೀರಾತು