8:17 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ, ಗೋಪೂಜೆ

15/11/2021, 11:08

ಮಂಗಳೂರು(reporterkarnataka.com): ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಜೀರ್ಣೋದ್ಧಾರದ ಪ್ರಕ್ರಿಯೆ ಪ್ರಾರಂಭಗೊಂಡಿದ್ದು ಆ ಪ್ರಯುಕ್ತ ಭಾನುವಾರ ದೇವಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ವೀರನಾರಾಯಣ ದೇವಸ್ಥಾನದ ಆಡಳಿತ ಮಂಡಳಿ ಜಂಟಿಯಾಗಿ ಭಜನೆ, ಗೋಪೂಜೆ,ಹಾಗೂ ಸತ್ಯನಾರಾಯಣ ಮಹಾಪೂಜೆ ಕಾರ್ಯಕ್ರಮ ನಡೆಸಿತು.

ಬೆಳಿಗ್ಗೆ ದೇವಸ್ಥಾನದ ತಂತ್ರಿಗಳಾಗಿರುವ ಶ್ರೀಹರಿ ಉಪಾಧ್ಯಾಯರ  ಮಾರ್ಗದರ್ಶನದಂತೆ ಪ್ರಧಾನ ಅರ್ಚಕರು ಜನಾರ್ದನ್ ಭಟ್ ಅವರು ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲ ಸಂಘದ ಅಧ್ಯಕ್ಷ ಮಯೂರ ಉಳ್ಳಾಲ್ ದಂಪತಿ ಗೋ ಪೂಜೆ ನೆರವೇರಿಸಿದರು.

ಜಿಲ್ಲಾ ಕುಲಾಲ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ ಎ. ಸಾಲ್ಯಾನ್ ಮತ್ತು ಪದಾಧಿಕಾರಿಗಳು ಸದಸ್ಯರು ಹಾಗೂ ವೀರನಾರಾಯಣ ದೇವಸ್ಥಾನದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಗೀತಾ ಮನೋಜ್ ಮತ್ತು ಪದಾಧಿಕಾರಿಗಳು ಸದಸ್ಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.

ನಂತರ ಶ್ರೀ ಸತ್ಯನಾರಾಯಣ ಮಹಾಪೂಜೆ ಅನ್ನಸಂತರ್ಪಣೆ ನೆರವೇರಿತು. ಪೂಜೆ ನಡೆದ ಬಳಿಕ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷರು ಮಯೂರ್ ಉಳ್ಳಾಲ್ ಮಾತನಾಡಿ, ಶ್ರೀ ವೀರನಾರಾಯಣ ಕ್ಷೇತ್ರ ಸಮಸ್ತ ಹಿಂದೂ ಬಾಂಧವರ ಕ್ಷೇತ್ರವಾಗಿದೆ. ಆದರೆ ಇತಿಹಾಸದಿಂದಲೇ ಕ್ಷೇತ್ರವನ್ನು ಕುಲಾಲ ಸಮಾಜ ಬಂಧುಗಳು ಆಡಳಿತವನ್ನು ನಡೆಸುತ್ತ ಬಂದಿದ್ದಾರೆ ಮುಂದೆಯೂ ನಡೆಸುತ್ತೇವೆ.  ಕ್ಷೇತ್ರ ಜೀರ್ಣೋದ್ಧಾರ ಆಗಬೇಕೆಂದು ಸಂಕಲ್ಪ ಮಾಡಿದ್ದೇವೆ. ಮುಂದಿನ ತಿಂಗಳು ಜೀರ್ಣೋದ್ಧಾರದ ದೊಡ್ಡ ಮಟ್ಟಿನ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಅದಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕುಲಾಲ ಸಮಾಜ ಬಾಂಧವರು ಸೇರುವವರು ಇದ್ದಾರೆ.  ಕ್ಷೇತ್ರದಲ್ಲಿ ಕೆಲವೇ ದಿನಗಳ ಹಿಂದೆ ಭಜನೆ ಸತ್ಯನಾರಾಯಣ ಪೂಜೆ ಗೋಪೂಜೆ ಮಾಡಬೇಕೆಂದು ನಿರ್ಧಾರ ಮಾಡಿದ್ದೆವು. ಅದಕ್ಕೆ ಸಾವಿರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಸೇರಿಕೊಂಡಿರುವುದು ಅಭಿಮಾನ ತಂದಿದೆ. ದೇಶ ವಿದೇಶಗಳಿಂದ ಸಮಾಜಬಾಂಧವರು ಕ್ಷೇತ್ರದ ಮೇಲೆ ಭಕ್ತಿಯಿಂದ ಸಹಕಾರವನ್ನು ನೀಡುವ ಭರವಸೆ ನೀಡಿದ್ದಾರೆ. ಶ್ರೀ ವೀರನಾರಾಯಣ ಕ್ಷೇತ್ರ ಕುಲಾಲರ ಅಸ್ಮಿತೆ ಎಂದು ನುಡಿದರು.


ವೇದಿಕೆಯಲ್ಲಿ ದೇವಾಲಯದ ಆಡಳಿತ ಮೊಕ್ತೇಸರರಾದ ಪುರುಷೋತ್ತಮ್ ಕುಲಾಲ್,  ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಎ. ದಾಮೋದರ, ವೀರನಾರಾಯಣ ಸೇವಾ ಟ್ರಸ್ಟ್ ಕಾರ್ಯಧ್ಯಕ್ಷ ಬಿ. ಪ್ರೇಮಾನಂದ ಕುಲಾಲ್,  ವೀರನಾರಾಯಣ ಸೇವಾ ಸಮಿತಿ ಅಧ್ಯಕ್ಷ ಸುಂದರ ಕುಲಾಲ್,  ದೇವಸ್ಥಾನದ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಗೀತಾ ಮನೋಜ್ , ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ ಸಾಲ್ಯಾನ್ ಹಾಗೂ ದಯಾನಂದ ಅಡ್ಯಾರ್ , ಎಂ.ಪಿ. ಬಂಗೇರ, ರಾಮಣ್ಣ ಉಪ್ಪಿನಂಗಡಿ,
ಪುಂಡರೀಕಾಕ್ಷ, ಭಾಸ್ಕರ್ ಪೆರುವಾಯಿ, ಸುರೇಶ್ ಕುಲಾಲ್ ಬಂಟ್ವಾಳ, ಸುರೇಶ್ ಕುಲಾಲ್ ಮಳಲಿ, ಬಿಜೆಪಿಯ ಹಿರಿಯ ನಾಯಕಿ ರೂಪಾ ಡಿ ಬಂಗೇರ,  ನಾಗೇಶ್ ಕುಲಾಲ್ ಕುಲಾಯಿ, ಕಿರಣ್ಅಟ್ಲೂರು,ಉದ್ಯಮಿ ಅನಿಲ್ ದಾಸ್  ಸುರೇಶ್ ಕುಲಾಲ್ ಮಂಗಳಾದೇವಿ ಮತ್ತಿತರರು ಉಪಸ್ಥಿತರಿದ್ದರು.

ನವೀನ್ ಕುಲಾಲ್ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಬಸ್ತಿ ವಂದಿಸಿದರು.

ಇದೇ ಸಂದರ್ಭ ಪುತ್ತೂರಿನ ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದಿಂದ ಮಣ್ಣಿನಿಂದ ತಯಾರಿಸಲಾದ ಮಣ್ಣಿನ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು