4:41 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆಂಗೋ ಹನುಮಂತಪ್ಪ ನಿಧನ: ಹಲವು ಗಣ್ಯರ ಸಂತಾಪ

30/05/2021, 03:35

ವಿಜಯಪುರ(reporterkarnataka news);ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹಾಗೂ ಬಯಲು ಸೀಮೆಯ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಕೆಂಗೋ ಹನುಮಂತಪ್ಪ ಅವರು ನಿಧನರಾದರು.

ದಾವಣಗೆರೆ ಜಿಲ್ಲೆಯ ಚಿಕ್ಕಬೂದಿಹಾಳದವರಾದ ಹನುಮಂತಪ್ಪ ಅವರು ಕುರುಬರ ಸಂಘದ ಅಧ್ಯಕ್ಷರಾಗಿ ಸಮಾಜದ ಏಳಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ.

ಬಯಲು ಸೀಮೆ ಪ್ರದೇಶ ಮಂಡಳಿಯ ಅಧ್ಯಕ್ಷರಾಗಿದ್ದಾಗ

ತಮ್ಮ ವೀವೆಚನಾ ಕೋಟದಡಿಯಲ್ಲಿ ಬರುವ ಅನುದಾನದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ನಡೆಸಿದ್ದಾರೆ.

ಶಿರನಾಳ ಗ್ರಾಮದ ಸಂ ನಂ 179 ರಲ್ಲಿ  ಹರಿವೂ ಹಳ್ಳಕ್ಕೆ ಅಡ್ಡಲಾಗಿ ಒಂದು ನಾಲ ಬದುಕೆ  2 ಲಕ್ಷ ರೂ. ಅನುದಾನ ಹಂಚಿಕೆ 

ಮಾಡಿದ್ದಾರೆ.  ಇದರಿಂದ ಇಲ್ಲಿರುವ ಕೋಳವೆ ಬಾವಿಯಲ್ಲಿ ಅಂತರ್ಜಲ ವೃದ್ದಿಯಾಯಿತು. 

ಇವರು ಎರಡು ಬಾರಿ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಎಂ ಎಲ್ ಎ ಹಾಗೂ ಎಂಪಿ ಟಿಕೆಟ್ ಗೆ ಪ್ರಯತ್ನಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶ್ಯಾಮನೂರು ಶಿವಶಂಕರಪ್ಪ ಅವರ ಆಪ್ತರಾಗಿದ್ದರು.

ಸದಾ ಹಸನ್ಮುಖಿಯಾದ ಅವರ ನಿಧನದಿಂದ ದೊಡ್ಡ ಮುಖಂಡನ ಕಳೆದುಕೊಂಡಂತಾಗಿದೆ. ದಾವಣಗೆರೆ ಜಿಲ್ಲಾ ಕುರುಬರ ಸಂಘ

ಹಾಗೂ ರಾಜ್ಯ ಕುರುಬರ ಸಂಘಕ್ಕೆ ಭಾರೀ ನಷ್ಟ ಉಂಟಾಗಿದೆ. ಇವರು ದಾವಣಗೆರೆ, ಬಳ್ಳಾರಿ ಮತ್ತು ಹಾವೆರಿ ಜಿಲ್ಲೆಯಲ್ಲಿ ಪ್ರಸಿದ್ಧರಾಗಿದ್ದರು.

ಹನುಮಂತಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು