1:47 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆಂಗೋ ಹನುಮಂತಪ್ಪ ನಿಧನ: ಹಲವು ಗಣ್ಯರ ಸಂತಾಪ

30/05/2021, 03:35

ವಿಜಯಪುರ(reporterkarnataka news);ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹಾಗೂ ಬಯಲು ಸೀಮೆಯ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಕೆಂಗೋ ಹನುಮಂತಪ್ಪ ಅವರು ನಿಧನರಾದರು.

ದಾವಣಗೆರೆ ಜಿಲ್ಲೆಯ ಚಿಕ್ಕಬೂದಿಹಾಳದವರಾದ ಹನುಮಂತಪ್ಪ ಅವರು ಕುರುಬರ ಸಂಘದ ಅಧ್ಯಕ್ಷರಾಗಿ ಸಮಾಜದ ಏಳಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ.

ಬಯಲು ಸೀಮೆ ಪ್ರದೇಶ ಮಂಡಳಿಯ ಅಧ್ಯಕ್ಷರಾಗಿದ್ದಾಗ

ತಮ್ಮ ವೀವೆಚನಾ ಕೋಟದಡಿಯಲ್ಲಿ ಬರುವ ಅನುದಾನದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ನಡೆಸಿದ್ದಾರೆ.

ಶಿರನಾಳ ಗ್ರಾಮದ ಸಂ ನಂ 179 ರಲ್ಲಿ  ಹರಿವೂ ಹಳ್ಳಕ್ಕೆ ಅಡ್ಡಲಾಗಿ ಒಂದು ನಾಲ ಬದುಕೆ  2 ಲಕ್ಷ ರೂ. ಅನುದಾನ ಹಂಚಿಕೆ 

ಮಾಡಿದ್ದಾರೆ.  ಇದರಿಂದ ಇಲ್ಲಿರುವ ಕೋಳವೆ ಬಾವಿಯಲ್ಲಿ ಅಂತರ್ಜಲ ವೃದ್ದಿಯಾಯಿತು. 

ಇವರು ಎರಡು ಬಾರಿ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಎಂ ಎಲ್ ಎ ಹಾಗೂ ಎಂಪಿ ಟಿಕೆಟ್ ಗೆ ಪ್ರಯತ್ನಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶ್ಯಾಮನೂರು ಶಿವಶಂಕರಪ್ಪ ಅವರ ಆಪ್ತರಾಗಿದ್ದರು.

ಸದಾ ಹಸನ್ಮುಖಿಯಾದ ಅವರ ನಿಧನದಿಂದ ದೊಡ್ಡ ಮುಖಂಡನ ಕಳೆದುಕೊಂಡಂತಾಗಿದೆ. ದಾವಣಗೆರೆ ಜಿಲ್ಲಾ ಕುರುಬರ ಸಂಘ

ಹಾಗೂ ರಾಜ್ಯ ಕುರುಬರ ಸಂಘಕ್ಕೆ ಭಾರೀ ನಷ್ಟ ಉಂಟಾಗಿದೆ. ಇವರು ದಾವಣಗೆರೆ, ಬಳ್ಳಾರಿ ಮತ್ತು ಹಾವೆರಿ ಜಿಲ್ಲೆಯಲ್ಲಿ ಪ್ರಸಿದ್ಧರಾಗಿದ್ದರು.

ಹನುಮಂತಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು