11:01 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು: ಕೋಲಾರ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ 

15/11/2021, 20:27

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ನವೆಂಬರ್ 16 ರಿಂದ ನಾಮಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು , ಚುನಾವಣೆ ಸುಸಜ್ಜಿತವಾಗಿ ಯಾವುದೇ ತೊಂದರೆಯಾಗದಂತೆ ನಡೆಯಬೇಕು . ಚುನಾವಣೆ ನೀತಿ ಸಂಹಿತೆಯನ್ನು ಯಾರಾದರು ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಚುನಾವಣಾ ಮಾದರಿ ನೀತಿ ಸಂಹಿತೆಯ ನಿಯಮಗಳನ್ನು ಎಲ್ಲಾ ಅಧಿಕಾರಿಗಳು ತಿಳಿದುಕೊಳ್ಳಬೇಕು . ಚುನಾವಣೆ ಸಮಯದಲ್ಲಿ ಅಧಿಕಾರಿಗಳು ತುಂಬಾ ಜಾಗೃತಿ ವಹಿಸಬೇಕು . ಯಾವುದೇ ರೀತಿ ತೊಂದರೆಗಳಾದಲ್ಲಿ ಚುನಾವಣಾ ಸಮಿತಿಗೆ ತಕ್ಷಣ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಚುನಾವಣಾ ಸಂಧರ್ಭದಲ್ಲಿ ಪ್ರಚಾರಕ್ಕಾಗಿ ಹಣ , ಮಧ್ಯ ಹಾಗೂ ವಸ್ತುಗಳನ್ನು ಹಂಚಲು ಬಳಸುತ್ತಾರೆ ಎಂಬ ದೂರುಗಳಿವೆ . ಮಧ್ಯವನ್ನು ದಸ್ತಾನು ಮಾಡುವುದು, ಸರಬರಾಜು ಮಾಡುವುದು ಹಾಗೂ ಹಂಚಿಕೆ ಮಾಡುವುದನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಬೇಕು . ಪ್ರಕರಣಗಳು ಕಂಡುಬಂದಲ್ಲಿ ಅಂತವರ ವಿರುದ್ದ ಪ್ರಕರಣ ದಾಖಲಾಯಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. 

ಹಣ ಹಂಚುವುದು, ದಾಸ್ತಾನು ಮಾಡುವುದು ಹಾಗೂ ಸರಬರಾಜು ಮಾಡುವುದರ ಬಗ್ಗೆ ದೂರುಗಳು ಬಂದಲ್ಲಿ ತಕ್ಷಣ ಪರಿಶೀಲನೆ ಮಾಡಬೇಕು. 10 ಲಕ್ಷಕ್ಕಿಂತ ಕಡಿಮೆ ಇರುವ ಹಣ ಸಿಕ್ಕಿದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮಿತಿ ಕ್ರಮಕ್ಕೆ ವಹಿಸಬೇಕು. ಸಮಿತಿಯು ಪರಿಶೀಲನೆ ನಡೆಸಿ ಹಣದ ಬಗ್ಗೆ ಕ್ರಮ ಕೈಗೊಳ್ಳುವರು . 10 ಲಕ್ಷಕ್ಕಿಂತ ಮೇಲ್ಪಟ್ಟ ಹಣ ಸಿಕ್ಕಿದಲ್ಲಿ ಆದಾಯ ತೆರಿಗೆ ಇಲಾಖೆಗೆ ವಹಿಸಬೇಕು. ಅವರು ಹಣವನ್ನು ಪರಿಶೀಲನೆ ನಡೆಸಿ ಹಣದ ಮಾಹಿತಿ ಸಿಗದಿದ್ದಲ್ಲಿ ಅವರ ವಿರುದ್ದ ಪ್ರಕರಣ ದಾಖಲಾಯಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು . ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಉಕೇಶ್ ಕುಮಾರ್ , ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ , ಚುನಾವಣಾ ತಹಶೀಲ್ದಾರ್ ಬಿ.ನಾಗವೇಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು