11:09 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಮೇ 31ರಿಂದ ಒಂದು ವಾರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್: ಬ್ಯಾಂಕ್, ಸರಕಾರಿ ಕಚೇರಿ ಕೂಡ ಬಂದ್

30/05/2021, 04:35

ಶಿವಮೊಗ್ಗ(reporterkarnataka news) :  ಮೇ 31 ರಿಂದ ಜೂನ್ 7 ರವರೆಗೆ ಶಿವಮೊಗ್ಗ ಜಿಲ್ಲಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ಹಾಲು ಮತ್ತು ಔಷಧಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ತರಕಾರಿ ಖರೀದಿಗೆ ತಳ್ಳುಗಾಡಿಯಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ದಿನಸಿ ಅಂಗಡಿಗಳಿಗೆ 6 ಗಂಟೆಯಿಂದ 8 ಗಂಟೆಯವರೆಗೆ ಮಾತ್ರ ತರೆಯಬಹುದು. ಲಾಕ್ ಡೌನ್ ಅವಧಿಯಲ್ಲಿ ಬ್ಯಾಂಕ್ ಸೇವೆಗಳು, ಸರಕಾರಿ ಕಚೇರಿ ಸಹ ಸ್ಥಗಿತಗೊಳ್ಳಲಿದೆ. ಅವಶ್ಯಕ ಸರಕಾರಿ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸುತ್ತವೆ. ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.

ಲಾಕ್ ಡೌನ್ ಇದ್ದರೂ ಅನಗತ್ಯವಾಗಿ ಕದ್ದುಮುಚ್ಚಿ ಓಡಾಟ ಜಾಸ್ತಿಯಾಗಿದೆ. ಅನಿವಾರ್ಯವಾಗಿ ಕಠಿಣ ಲಾಕ್ ಡೌನ್ ಕೈಗೊಳ್ಳುವಂತಾಗಿದೆ. ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡುವವರ ವಾಹನ ಸಹ ಸೀಜ್ ಮಾಡಲಾಗುತ್ತದೆ. ಜೊತೆಗೆ ವಾಹನ ಚಾಲಕ ಹಾಗೂ ಸವಾರನನ್ನು ಪೊಲೀಸರು ವಶಕ್ಕೆ ಪಡೆಯಲು ಸಚಿವರ ಸೂಚನೆ ನೀಡಲಾಗಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು