5:15 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಮೇ 31ರಿಂದ ಒಂದು ವಾರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್: ಬ್ಯಾಂಕ್, ಸರಕಾರಿ ಕಚೇರಿ ಕೂಡ ಬಂದ್

30/05/2021, 04:35

ಶಿವಮೊಗ್ಗ(reporterkarnataka news) :  ಮೇ 31 ರಿಂದ ಜೂನ್ 7 ರವರೆಗೆ ಶಿವಮೊಗ್ಗ ಜಿಲ್ಲಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ಹಾಲು ಮತ್ತು ಔಷಧಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ತರಕಾರಿ ಖರೀದಿಗೆ ತಳ್ಳುಗಾಡಿಯಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ದಿನಸಿ ಅಂಗಡಿಗಳಿಗೆ 6 ಗಂಟೆಯಿಂದ 8 ಗಂಟೆಯವರೆಗೆ ಮಾತ್ರ ತರೆಯಬಹುದು. ಲಾಕ್ ಡೌನ್ ಅವಧಿಯಲ್ಲಿ ಬ್ಯಾಂಕ್ ಸೇವೆಗಳು, ಸರಕಾರಿ ಕಚೇರಿ ಸಹ ಸ್ಥಗಿತಗೊಳ್ಳಲಿದೆ. ಅವಶ್ಯಕ ಸರಕಾರಿ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸುತ್ತವೆ. ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.

ಲಾಕ್ ಡೌನ್ ಇದ್ದರೂ ಅನಗತ್ಯವಾಗಿ ಕದ್ದುಮುಚ್ಚಿ ಓಡಾಟ ಜಾಸ್ತಿಯಾಗಿದೆ. ಅನಿವಾರ್ಯವಾಗಿ ಕಠಿಣ ಲಾಕ್ ಡೌನ್ ಕೈಗೊಳ್ಳುವಂತಾಗಿದೆ. ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡುವವರ ವಾಹನ ಸಹ ಸೀಜ್ ಮಾಡಲಾಗುತ್ತದೆ. ಜೊತೆಗೆ ವಾಹನ ಚಾಲಕ ಹಾಗೂ ಸವಾರನನ್ನು ಪೊಲೀಸರು ವಶಕ್ಕೆ ಪಡೆಯಲು ಸಚಿವರ ಸೂಚನೆ ನೀಡಲಾಗಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು