9:03 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಸದ್ಯ ಬಸ್ ಪ್ರಯಾಣ ದರ ಇಳಿಕೆ ಇಲ್ಲ, ಡಿಸೇಲ್ ದರ 75 ರೂ. ಗೆ ಇಳಿದರೆ ಮಾತ್ರ ದರ ಇಳಿಕೆ: ಕುಯಿಲಾಡಿ ಸುರೇಶ್ ನಾಯಕ್ 

16/11/2021, 10:28

ಉಡುಪಿ( reporterkarnataka.com): ಡಿಸೇಲ್ ದರ 75 ರೂ. ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ. ಆದರೆ ಸದ್ಯ ಬಸ್ ಪ್ರಮಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಉಡುಪಿ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ

ಈಗಿರುವ ಬಸ್ ಪ್ರಯಾಣ ದರ ಡಿಸೇಲ್ ಗೆ ₹ 85 ಆದಾಗ ಹೆಚ್ಚು ಮಾಡಿರುವ ದರ. ಆದಾದ ಮೇಲೆ ಬಸ್ ದರ ಹೆಚ್ಚು ಮಾಡಿಲ್ಲ. ಡಿಸೇಲ್ ದರ ₹103ಕ್ಕೆ ಏರಿಕೆಯಾದಗಲೂ ಜಾಸ್ತಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಡಿಸೇಲ್ ದರ ₹75ರಿಂದ 70ಕ್ಕೆ ಇಳಿದರೆ ಸಾರಿಗೆ ವ್ಯವಸ್ಥೆ ಉಳಿಯುತ್ತದೆ. ಕೊರೊನಾ ಬಂದ ನಂತರ ಜನರು ಕಾರು, ಬೈಕ್ ಗಳಲ್ಲಿ‌ ಹೆಚ್ಚು ಓಡಾಡಲು ಆರಂಭಿಸಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಕಡಿಮೆಯಾಗಿದೆ. ಇದು ಸಾರಿಗೆ ವ್ಯವಹಾರಕ್ಕೆ ದೊಡ್ಡ ಹೊಡೆತ ನೀಡಿದೆ.

ಸದ್ಯ ಕೊರೊನಾ ಪ್ರಭಾವ ಕಡಿಮೆಯಾಗಿರುವುದರಿಂದ ಜನರು ಬಸ್ ಸಂಚರಿಸಲು ಶುರು ಮಾಡಿದ್ದಾರೆ. ಆದರೆ ಈಗಿನ ಡಿಸೇಲ್ ದರದಲ್ಲಿ ಸಾರಿಗೆ ವ್ಯವಹಾರ ನಡೆಸುವುದು ತುಂಬಾ ಕಷ್ಟವಾಗಿದೆ. ಹೀಗಾಗಿ ಡಿಸೇಲ್ ದರ ₹75 ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು