8:16 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಸದ್ಯ ಬಸ್ ಪ್ರಯಾಣ ದರ ಇಳಿಕೆ ಇಲ್ಲ, ಡಿಸೇಲ್ ದರ 75 ರೂ. ಗೆ ಇಳಿದರೆ ಮಾತ್ರ ದರ ಇಳಿಕೆ: ಕುಯಿಲಾಡಿ ಸುರೇಶ್ ನಾಯಕ್ 

16/11/2021, 10:28

ಉಡುಪಿ( reporterkarnataka.com): ಡಿಸೇಲ್ ದರ 75 ರೂ. ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ. ಆದರೆ ಸದ್ಯ ಬಸ್ ಪ್ರಮಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಉಡುಪಿ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ

ಈಗಿರುವ ಬಸ್ ಪ್ರಯಾಣ ದರ ಡಿಸೇಲ್ ಗೆ ₹ 85 ಆದಾಗ ಹೆಚ್ಚು ಮಾಡಿರುವ ದರ. ಆದಾದ ಮೇಲೆ ಬಸ್ ದರ ಹೆಚ್ಚು ಮಾಡಿಲ್ಲ. ಡಿಸೇಲ್ ದರ ₹103ಕ್ಕೆ ಏರಿಕೆಯಾದಗಲೂ ಜಾಸ್ತಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಡಿಸೇಲ್ ದರ ₹75ರಿಂದ 70ಕ್ಕೆ ಇಳಿದರೆ ಸಾರಿಗೆ ವ್ಯವಸ್ಥೆ ಉಳಿಯುತ್ತದೆ. ಕೊರೊನಾ ಬಂದ ನಂತರ ಜನರು ಕಾರು, ಬೈಕ್ ಗಳಲ್ಲಿ‌ ಹೆಚ್ಚು ಓಡಾಡಲು ಆರಂಭಿಸಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಕಡಿಮೆಯಾಗಿದೆ. ಇದು ಸಾರಿಗೆ ವ್ಯವಹಾರಕ್ಕೆ ದೊಡ್ಡ ಹೊಡೆತ ನೀಡಿದೆ.

ಸದ್ಯ ಕೊರೊನಾ ಪ್ರಭಾವ ಕಡಿಮೆಯಾಗಿರುವುದರಿಂದ ಜನರು ಬಸ್ ಸಂಚರಿಸಲು ಶುರು ಮಾಡಿದ್ದಾರೆ. ಆದರೆ ಈಗಿನ ಡಿಸೇಲ್ ದರದಲ್ಲಿ ಸಾರಿಗೆ ವ್ಯವಹಾರ ನಡೆಸುವುದು ತುಂಬಾ ಕಷ್ಟವಾಗಿದೆ. ಹೀಗಾಗಿ ಡಿಸೇಲ್ ದರ ₹75 ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು