3:30 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಸುರತ್ಕಲ್‌ನಲ್ಲಿ ಮತ್ತೆ ನೈತಿಕ ಪೋಲಿಸ್‌ಗಿರಿ ; ಆರು ಮಂದಿಯ ಬಂಧನ

16/11/2021, 13:20

ಮಂಗಳೂರು, ನ.16: ನಗರ ಹೊರವಲಯದ ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯನ್ನು ಬೈಕಿನಲ್ಲಿ ಆಕೆಯ ಅಪಾರ್ಟೆಂಟ್ ಗೆ ಬಿಡಲು ಹೋಗಿದ್ದ ಸಂದರ್ಭದಲ್ಲಿ ಆರು ಜನರ ತಂಡ ಅಡ್ಡಗಟ್ಟಿ ಇಬ್ಬರಿಗೂ ಹಲ್ಲೆ ನಡೆಸಿದೆ.

ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನಲಾದ ಆರು ಮಂದಿ ಅನ್ಯಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಹಮ್ಮದ್ ಯಾಸೀನ್ ಮತ್ತು ಆತನ ಸ್ನೇಹಿತೆ ಆನ್ಸಿ ವಿನ್ನಿ ಡಯಾಸ್ ಹಲ್ಲೆಗೀಡಾದವರು. ಇವರು ಮುಕ್ಕದ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಸಂಜೆಯ ವಿಹಾರ ಮುಗಿಸಿ ರಾತ್ರಿ ಹತ್ತು ಗಂಟೆ ವೇಳೆಗೆ ಹುಡುಗಿಯನ್ನು ಬೈಕಿನಲ್ಲಿ ಇಡ್ಯಾದ ಕಲ್ಯಾಣಿ ಪರ್ಲ್ ಅಪಾರ್ಟ್ ಮೆಂಟಿಗೆ ಬಿಡಲು ತೆರಳುತ್ತಿದ್ದ.

ಬೈಕ್ ಅಪಾರ್ಟೆಂಟ್ ತಲುಪುತ್ತಿದ್ದಂತೆ ತಡೆದು ನಿಲ್ಲಿಸಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿ ನಿಮ್ಮ ಹೆಸರೇನೆಂದು ಕೇಳಿ ಕೈಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಯುವತಿಯನ್ನು ಕೈಯಲ್ಲಿ ಹಿಡಿದು ನೆಲಕ್ಕೆ ದೂಡಿ ಹಾಕಿದ್ದು ನಿನಗೆ ಬ್ಯಾರಿಯೇ ಆಗಬೇಕಾ ಎಂದು ಪ್ರಶ್ನಿಸಿ ನಿಂದಿಸಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್, ಸುಕೇಶ್ ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು