6:40 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಉಡುಪಿ: ಬೀಗ ಮುರಿದು ಕಳ್ಳತನ; ಚಿನ್ನಾಭರಣ ಸಹಿತ ಒಟ್ಟು 3.70 ಲಕ್ಷ ರೂ. ಮೌಲ್ಯದ ಸೊತ್ತು ಕಳ್ಳರ ಪಾಲು

17/11/2021, 21:01

ಉಡುಪಿ(reporterkarnataka.com):  ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು‌ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗದ ಜುಮಾದಿಕಟ್ಟೆ ದೇವಸ್ಥಾನದ ಬಳಿ‌ ಬಾಬು ಆಚಾರ್ಯ ಎಂಬವರ ಮನೆಯಲ್ಲಿ‌ ನಡೆದಿದೆ.

ಮಂಗಳವಾರ ರಾತ್ರಿ 7ರಿಂದ ಬುಧವಾರ ಬೆಳಗ್ಗೆ 5.30ರ ಮಧ್ಯೆ ಯಾರೋ ಕಳ್ಳರು ಬಾಬು ಆಚಾರ್ಯರ ಮನೆಯ ಬಾಗಿಲು‌ ಮರಿದು ಒಳನುಗ್ಗಿದ್ದಾರೆ. ಬಳಿಕ ಕಪಾಟಿನಲ್ಲಿದ್ದ ಬೀಗದಿಂದ ಲಾಕರ್‌ತೆಗೆದು ಅದರಲ್ಲಿದ್ದ 12 ಗ್ರಾಂ ತೂಕದ ಚಿನ್ನದ ತೆಂಡುಲ್ಕರ್‌ಚೈನ್‌, 3 ಗ್ರಾಂ ತೂಕದ ಚಿನ್ನದ ಪವಿತ್ರ ಉಂಗುರ-1, 24 ಗ್ರಾಂ ತೂಕದ ಕಾಶಿತಾಳಿ ಸರ-1, 22 ಗ್ರಾಂ ತೂಕದ ಪೆಂಡೆಂಟ್‌ಇರುವ ಮುತ್ತಿನ ಸರ-1, 26 ಗ್ರಾಂ ತೂಕದ ಚಿನ್ನದ ಬಳೆಗಳು-2, 3 ಗ್ರಾಂ ತೂಕದ ಚಿನ್ನದ ಉಂಗುರ-1 ಸಹಿತ ಒಟ್ಟು 90 ಗ್ರಾಂ ತೂಕದ ₹ 3,60,000/- ಮೌಲ್ಯದ ಚಿನ್ನಾಭರಣಗಳನ್ನು ಕಳವು‌ ಮಾಡಿದ್ದಾರೆ.

ಅಲ್ಲದೆ, ಬೆಳ್ಳಿ ಹರಿವಾಣ-1, ಬೆಳ್ಳಿ ತೋಟ-1, ಬೆಳ್ಳಿ ಕವಳಿಕೆ ಸೌಟು-1 ಒಟ್ಟು ರೂ. 10,000 ಮೌಲ್ಯದ ಬೆಳ್ಳಿ ಸಾಮಾಗ್ರಿಗಳು ಜೊತೆಗೆ ದೇವರ ಡಬ್ಬದಲ್ಲಿದ್ದ ಅಂದಾಜು ರೂ. 400/- ಮತ್ತು ಪಿರ್ಯಾದುದಾರರ ಅಣ್ಣನ ಜಾಗದ ಮೂಲ ದಾಖಲೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಒಟ್ಟು ಮೌಲ್ಯ 3,70,400 ಮೌಲ್ಯದ ಸೊತ್ತುಗಳನ್ನು‌ ಕಳ್ಳರು ಕಳವು ಮಾಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು