5:45 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಉಡುಪಿ: ಬೀಗ ಮುರಿದು ಕಳ್ಳತನ; ಚಿನ್ನಾಭರಣ ಸಹಿತ ಒಟ್ಟು 3.70 ಲಕ್ಷ ರೂ. ಮೌಲ್ಯದ ಸೊತ್ತು ಕಳ್ಳರ ಪಾಲು

17/11/2021, 21:01

ಉಡುಪಿ(reporterkarnataka.com):  ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು‌ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗದ ಜುಮಾದಿಕಟ್ಟೆ ದೇವಸ್ಥಾನದ ಬಳಿ‌ ಬಾಬು ಆಚಾರ್ಯ ಎಂಬವರ ಮನೆಯಲ್ಲಿ‌ ನಡೆದಿದೆ.

ಮಂಗಳವಾರ ರಾತ್ರಿ 7ರಿಂದ ಬುಧವಾರ ಬೆಳಗ್ಗೆ 5.30ರ ಮಧ್ಯೆ ಯಾರೋ ಕಳ್ಳರು ಬಾಬು ಆಚಾರ್ಯರ ಮನೆಯ ಬಾಗಿಲು‌ ಮರಿದು ಒಳನುಗ್ಗಿದ್ದಾರೆ. ಬಳಿಕ ಕಪಾಟಿನಲ್ಲಿದ್ದ ಬೀಗದಿಂದ ಲಾಕರ್‌ತೆಗೆದು ಅದರಲ್ಲಿದ್ದ 12 ಗ್ರಾಂ ತೂಕದ ಚಿನ್ನದ ತೆಂಡುಲ್ಕರ್‌ಚೈನ್‌, 3 ಗ್ರಾಂ ತೂಕದ ಚಿನ್ನದ ಪವಿತ್ರ ಉಂಗುರ-1, 24 ಗ್ರಾಂ ತೂಕದ ಕಾಶಿತಾಳಿ ಸರ-1, 22 ಗ್ರಾಂ ತೂಕದ ಪೆಂಡೆಂಟ್‌ಇರುವ ಮುತ್ತಿನ ಸರ-1, 26 ಗ್ರಾಂ ತೂಕದ ಚಿನ್ನದ ಬಳೆಗಳು-2, 3 ಗ್ರಾಂ ತೂಕದ ಚಿನ್ನದ ಉಂಗುರ-1 ಸಹಿತ ಒಟ್ಟು 90 ಗ್ರಾಂ ತೂಕದ ₹ 3,60,000/- ಮೌಲ್ಯದ ಚಿನ್ನಾಭರಣಗಳನ್ನು ಕಳವು‌ ಮಾಡಿದ್ದಾರೆ.

ಅಲ್ಲದೆ, ಬೆಳ್ಳಿ ಹರಿವಾಣ-1, ಬೆಳ್ಳಿ ತೋಟ-1, ಬೆಳ್ಳಿ ಕವಳಿಕೆ ಸೌಟು-1 ಒಟ್ಟು ರೂ. 10,000 ಮೌಲ್ಯದ ಬೆಳ್ಳಿ ಸಾಮಾಗ್ರಿಗಳು ಜೊತೆಗೆ ದೇವರ ಡಬ್ಬದಲ್ಲಿದ್ದ ಅಂದಾಜು ರೂ. 400/- ಮತ್ತು ಪಿರ್ಯಾದುದಾರರ ಅಣ್ಣನ ಜಾಗದ ಮೂಲ ದಾಖಲೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಒಟ್ಟು ಮೌಲ್ಯ 3,70,400 ಮೌಲ್ಯದ ಸೊತ್ತುಗಳನ್ನು‌ ಕಳ್ಳರು ಕಳವು ಮಾಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು