3:30 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಉಡುಪಿ: ಬೀಗ ಮುರಿದು ಕಳ್ಳತನ; ಚಿನ್ನಾಭರಣ ಸಹಿತ ಒಟ್ಟು 3.70 ಲಕ್ಷ ರೂ. ಮೌಲ್ಯದ ಸೊತ್ತು ಕಳ್ಳರ ಪಾಲು

17/11/2021, 21:01

ಉಡುಪಿ(reporterkarnataka.com):  ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು‌ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗದ ಜುಮಾದಿಕಟ್ಟೆ ದೇವಸ್ಥಾನದ ಬಳಿ‌ ಬಾಬು ಆಚಾರ್ಯ ಎಂಬವರ ಮನೆಯಲ್ಲಿ‌ ನಡೆದಿದೆ.

ಮಂಗಳವಾರ ರಾತ್ರಿ 7ರಿಂದ ಬುಧವಾರ ಬೆಳಗ್ಗೆ 5.30ರ ಮಧ್ಯೆ ಯಾರೋ ಕಳ್ಳರು ಬಾಬು ಆಚಾರ್ಯರ ಮನೆಯ ಬಾಗಿಲು‌ ಮರಿದು ಒಳನುಗ್ಗಿದ್ದಾರೆ. ಬಳಿಕ ಕಪಾಟಿನಲ್ಲಿದ್ದ ಬೀಗದಿಂದ ಲಾಕರ್‌ತೆಗೆದು ಅದರಲ್ಲಿದ್ದ 12 ಗ್ರಾಂ ತೂಕದ ಚಿನ್ನದ ತೆಂಡುಲ್ಕರ್‌ಚೈನ್‌, 3 ಗ್ರಾಂ ತೂಕದ ಚಿನ್ನದ ಪವಿತ್ರ ಉಂಗುರ-1, 24 ಗ್ರಾಂ ತೂಕದ ಕಾಶಿತಾಳಿ ಸರ-1, 22 ಗ್ರಾಂ ತೂಕದ ಪೆಂಡೆಂಟ್‌ಇರುವ ಮುತ್ತಿನ ಸರ-1, 26 ಗ್ರಾಂ ತೂಕದ ಚಿನ್ನದ ಬಳೆಗಳು-2, 3 ಗ್ರಾಂ ತೂಕದ ಚಿನ್ನದ ಉಂಗುರ-1 ಸಹಿತ ಒಟ್ಟು 90 ಗ್ರಾಂ ತೂಕದ ₹ 3,60,000/- ಮೌಲ್ಯದ ಚಿನ್ನಾಭರಣಗಳನ್ನು ಕಳವು‌ ಮಾಡಿದ್ದಾರೆ.

ಅಲ್ಲದೆ, ಬೆಳ್ಳಿ ಹರಿವಾಣ-1, ಬೆಳ್ಳಿ ತೋಟ-1, ಬೆಳ್ಳಿ ಕವಳಿಕೆ ಸೌಟು-1 ಒಟ್ಟು ರೂ. 10,000 ಮೌಲ್ಯದ ಬೆಳ್ಳಿ ಸಾಮಾಗ್ರಿಗಳು ಜೊತೆಗೆ ದೇವರ ಡಬ್ಬದಲ್ಲಿದ್ದ ಅಂದಾಜು ರೂ. 400/- ಮತ್ತು ಪಿರ್ಯಾದುದಾರರ ಅಣ್ಣನ ಜಾಗದ ಮೂಲ ದಾಖಲೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಒಟ್ಟು ಮೌಲ್ಯ 3,70,400 ಮೌಲ್ಯದ ಸೊತ್ತುಗಳನ್ನು‌ ಕಳ್ಳರು ಕಳವು ಮಾಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು