8:16 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಉಡುಪಿ: ಬೀಗ ಮುರಿದು ಕಳ್ಳತನ; ಚಿನ್ನಾಭರಣ ಸಹಿತ ಒಟ್ಟು 3.70 ಲಕ್ಷ ರೂ. ಮೌಲ್ಯದ ಸೊತ್ತು ಕಳ್ಳರ ಪಾಲು

17/11/2021, 21:01

ಉಡುಪಿ(reporterkarnataka.com):  ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು‌ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗದ ಜುಮಾದಿಕಟ್ಟೆ ದೇವಸ್ಥಾನದ ಬಳಿ‌ ಬಾಬು ಆಚಾರ್ಯ ಎಂಬವರ ಮನೆಯಲ್ಲಿ‌ ನಡೆದಿದೆ.

ಮಂಗಳವಾರ ರಾತ್ರಿ 7ರಿಂದ ಬುಧವಾರ ಬೆಳಗ್ಗೆ 5.30ರ ಮಧ್ಯೆ ಯಾರೋ ಕಳ್ಳರು ಬಾಬು ಆಚಾರ್ಯರ ಮನೆಯ ಬಾಗಿಲು‌ ಮರಿದು ಒಳನುಗ್ಗಿದ್ದಾರೆ. ಬಳಿಕ ಕಪಾಟಿನಲ್ಲಿದ್ದ ಬೀಗದಿಂದ ಲಾಕರ್‌ತೆಗೆದು ಅದರಲ್ಲಿದ್ದ 12 ಗ್ರಾಂ ತೂಕದ ಚಿನ್ನದ ತೆಂಡುಲ್ಕರ್‌ಚೈನ್‌, 3 ಗ್ರಾಂ ತೂಕದ ಚಿನ್ನದ ಪವಿತ್ರ ಉಂಗುರ-1, 24 ಗ್ರಾಂ ತೂಕದ ಕಾಶಿತಾಳಿ ಸರ-1, 22 ಗ್ರಾಂ ತೂಕದ ಪೆಂಡೆಂಟ್‌ಇರುವ ಮುತ್ತಿನ ಸರ-1, 26 ಗ್ರಾಂ ತೂಕದ ಚಿನ್ನದ ಬಳೆಗಳು-2, 3 ಗ್ರಾಂ ತೂಕದ ಚಿನ್ನದ ಉಂಗುರ-1 ಸಹಿತ ಒಟ್ಟು 90 ಗ್ರಾಂ ತೂಕದ ₹ 3,60,000/- ಮೌಲ್ಯದ ಚಿನ್ನಾಭರಣಗಳನ್ನು ಕಳವು‌ ಮಾಡಿದ್ದಾರೆ.

ಅಲ್ಲದೆ, ಬೆಳ್ಳಿ ಹರಿವಾಣ-1, ಬೆಳ್ಳಿ ತೋಟ-1, ಬೆಳ್ಳಿ ಕವಳಿಕೆ ಸೌಟು-1 ಒಟ್ಟು ರೂ. 10,000 ಮೌಲ್ಯದ ಬೆಳ್ಳಿ ಸಾಮಾಗ್ರಿಗಳು ಜೊತೆಗೆ ದೇವರ ಡಬ್ಬದಲ್ಲಿದ್ದ ಅಂದಾಜು ರೂ. 400/- ಮತ್ತು ಪಿರ್ಯಾದುದಾರರ ಅಣ್ಣನ ಜಾಗದ ಮೂಲ ದಾಖಲೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಒಟ್ಟು ಮೌಲ್ಯ 3,70,400 ಮೌಲ್ಯದ ಸೊತ್ತುಗಳನ್ನು‌ ಕಳ್ಳರು ಕಳವು ಮಾಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು