6:40 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಬಾಗಲಕೋಟೆ ಕುಂಬಾರಹಳ್ಳದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆ ಪತ್ತೆ; ಭಯಭೀತರಾದ ಗ್ರಾಮಸ್ಥರು; ಅರಣ್ಯ ಇಲಾಖೆ ಎಚ್ಚರಿಕೆ

30/05/2021, 09:49

ಭೀಮಣ್ಣ ಪೂಜಾರ್ ವಿಜಯಪುರ
info.reporterkarnataka@gmail.com

ಬಾಗಲಕೊಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕುಂಬಾರಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲವು ದಿನಗಳಿಂದ ಸಾಕು ಪ್ರಾಣಿಗಳು ಕಾಡು ಪ್ರಾಣಿಯ ದಾಳಿಗೆ ಸಾವನ್ನಪ್ಪುತ್ತಿತ್ತು. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು. ಸ್ಥಳೀಯ ಶಾಸಕ ಆನಂದ ನ್ಯಾಮಗೌಡ ಅವರಿಗೆ ದೂರು ನೀಡಿದ್ದರು. ಶಾಸಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ, ದಾಳಿ ಮಾಡುತ್ತಿರುವುದು ಅದ್ಯಾವ ಪ್ರಾಣಿ ಎಂಬುವುದನ್ನು ಪತ್ತೆ ಹಚ್ಚಲು ಸಿಸಿ ಕ್ಯಾಮೆರಾ ಅಳವಡಿಸುವಂತೆ ಸೂಚಿಸಿದ್ದರು. ಅದರಂತೆ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯವರು ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಇದರ ಪ್ರಕಾರ ದಾಳಿ ಮಾಡುವ ಕಾಡು ಪ್ರಾಣಿ ಚಿರತೆ ಎನ್ನುವುದು ಸ್ಪಷ್ಟವಾಗಿದೆ. ಮನೆಯೊಂದರ ಮುಂದೆ ಕಟ್ಟಿ ಹಾಕಿದ್ದ ಮೇಕೆಯೊಂದರ ಮೇಲೆ ಚಿರತೆ ದಾಳಿ ನಡೆಸಿ, ತಿಂದು ಹಾಕಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕುಂಬಾರಹಳ್ಳ ಸುತ್ತಮುತ್ತಲಿನ ಕುಂಚನೂರು, ಜಕನೂರು, ಸನಾಳ ಹಾಗೂ ಆಲಗೂರಿನ ಗ್ರಾಮಸ್ಥರು ಎಚ್ಚರದಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು