4:34 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಬಾಗಲಕೋಟೆ ಕುಂಬಾರಹಳ್ಳದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆ ಪತ್ತೆ; ಭಯಭೀತರಾದ ಗ್ರಾಮಸ್ಥರು; ಅರಣ್ಯ ಇಲಾಖೆ ಎಚ್ಚರಿಕೆ

30/05/2021, 09:49

ಭೀಮಣ್ಣ ಪೂಜಾರ್ ವಿಜಯಪುರ
info.reporterkarnataka@gmail.com

ಬಾಗಲಕೊಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕುಂಬಾರಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲವು ದಿನಗಳಿಂದ ಸಾಕು ಪ್ರಾಣಿಗಳು ಕಾಡು ಪ್ರಾಣಿಯ ದಾಳಿಗೆ ಸಾವನ್ನಪ್ಪುತ್ತಿತ್ತು. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು. ಸ್ಥಳೀಯ ಶಾಸಕ ಆನಂದ ನ್ಯಾಮಗೌಡ ಅವರಿಗೆ ದೂರು ನೀಡಿದ್ದರು. ಶಾಸಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ, ದಾಳಿ ಮಾಡುತ್ತಿರುವುದು ಅದ್ಯಾವ ಪ್ರಾಣಿ ಎಂಬುವುದನ್ನು ಪತ್ತೆ ಹಚ್ಚಲು ಸಿಸಿ ಕ್ಯಾಮೆರಾ ಅಳವಡಿಸುವಂತೆ ಸೂಚಿಸಿದ್ದರು. ಅದರಂತೆ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯವರು ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಇದರ ಪ್ರಕಾರ ದಾಳಿ ಮಾಡುವ ಕಾಡು ಪ್ರಾಣಿ ಚಿರತೆ ಎನ್ನುವುದು ಸ್ಪಷ್ಟವಾಗಿದೆ. ಮನೆಯೊಂದರ ಮುಂದೆ ಕಟ್ಟಿ ಹಾಕಿದ್ದ ಮೇಕೆಯೊಂದರ ಮೇಲೆ ಚಿರತೆ ದಾಳಿ ನಡೆಸಿ, ತಿಂದು ಹಾಕಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕುಂಬಾರಹಳ್ಳ ಸುತ್ತಮುತ್ತಲಿನ ಕುಂಚನೂರು, ಜಕನೂರು, ಸನಾಳ ಹಾಗೂ ಆಲಗೂರಿನ ಗ್ರಾಮಸ್ಥರು ಎಚ್ಚರದಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು