5:35 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

7 ತಿಂಗಳಿನಿಂದ ನಾಪತ್ತೆಯಾಗಿರುವ ಪೆರಂಪಳ್ಳಿ ತರುಣಿ: ಶೀಘ್ರ ಪತ್ತೆಗೆ ಆಗ್ರಹಿಸಿ ಕೆಥೊಲಿಕ್‌ ಸಭಾದಿಂದ ಎಸ್ಪಿಗೆ ಮನವಿ

19/11/2021, 20:01

ಉಡುಪಿ(reporterkarnataka.com): ಏಳು ತಿಂಗಳಿನಿಂದ ನಾಪತ್ತೆಯಾದ ಪೆರಂಪಳ್ಳಿಯ ಯುವತಿಯೋರ್ವಳನ್ನು ಕೂಡಲೇ ಪತ್ತೆ ಹಚ್ಚುವಂತೆ ಆಗ್ರಹಿಸಿ ಕೆಥೊಲಿಕ್‌ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಅನುಪಸ್ಥೀತಿಯಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಚಂದ್ರ ಅವರಿಗೆ ಕಥೊಲಿಕ್‌ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾದ ಮೇರಿ ಡಿʼಸೋಜಾ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ನಿವಾಸಿಯಾಗಿರುವ ಅವಿನಾ (16) ಎಂಬ ತರುಣಿ 2021 ಏಪ್ರಿಲ್‌ 13 ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದು, ಈಗಾಗಲೇ ಆಕೆಯ ಪೋಷಕರು ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಈ ವರೆಗೆ ಆಕೆಯ ಇರುವಿಕೆ ಅಥವಾ ಪತ್ತೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ ಆಕೆಯ ಪೋಷಕರು ಆತಂಕಿತರಾಗಿದ್ದಾರೆ. ಆಕೆಯ ಪತ್ತೆಗಾಗಿ ಪೊಲೀಸ್‌ ಇಲಾಖೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದು ಸಂಸ್ಥೆಯ ಗಮನದಲ್ಲಿದ್ದು ಆದಷ್ಟು ಬೇಗ ಆಕೆಯನ್ನು ಪತ್ತೆ ಮಾಡುವ ಮೂಲಕ ನೊಂದ ಕುಟಂಬಕ್ಕೆ ನ್ಯಾಯ ಒದಗಿಸಿ ಕೊಡುವಂತೆ  ಈ ವೇಳೆ ಮೇರಿ ಡಿಸೋಜಾ ಮನವಿ ಮಾಡಿದರು.

ಮನವಿ ಸ್ವೀಕರಿಸಿದ  ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಚಂದ್ರ ಪೊಲೀಸ್‌ ಇಲಾಖೆ ಯುವತಿಯ ಪತ್ತೆಗಾಗಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು ಶೀಘ್ರದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ವೇಳೆ ಕಥೊಲಿಕ್‌ ಸಭಾ ಉಡುಪಿ ಪ್ರದೇಶ್‌ ಇದರ ನಿಯೋಜಿತ ಅಧ್ಯಕ್ಷರಾದ ಸಂತೋಷ್‌ ಕರ್ನೆಲಿಯೋ, ಉಡುಪಿ ವಲಯ ಅಧ್ಯಕ್ಷರಾದ ಶಾಂತಿ ಪಿರೇರಾ, ಉಡುಪಿ ಘಟಕದ ಅಧ್ಯಕ್ಷರಾದ ಲೆಸ್ಲಿ ಕರ್ನೇಲಿಯೋ, ಪೆರಂಪಳ್ಳಿ ಘಟಕದ ಅಧ್ಯಕ್ಷರಾದ ಒಲಿವರ್‌ ಡಿʼಸೋಜಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು