2:15 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿ ಹಬ್ಬ ಸಂಭ್ರಮ: ರಥೋತ್ಸವಕ್ಕೆ ಸಾಕ್ಷಿಯಾದ ಸಹಸ್ರ ಸಹಸ್ರ ಭಕ್ತರು

19/11/2021, 22:18

ಕುಂದಾಪುರ(reporterkarnataka.com): ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿ ಹಬ್ಬ ಸಂಭ್ರಮದಿಂದ ಶುಕ್ರವಾರ ನಡೆಯಿತು.

ರಥೋತ್ಸವದ ಅಂಗವಾಗಿ ನ.12ರಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದವು. ಶುಕ್ರವಾರ ಬೆಳಿಗ್ಗೆ 11-50ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ಶ್ರೀ ಮನ್ಮಹಾರಥೋತ್ಸವ ನಡೆಯಿತು.

ಕೋಟೇಶ್ವರ ರಥೋತ್ಸವದ ಸಂದರ್ಭದಲ್ಲಿ ಗರುಡ ಪ್ರದಕ್ಷಣೆ ಸಹಜ ಪ್ರಕ್ರಿಯೆ. ಎಷ್ಟೋ ಜನ ಭಕ್ತರು ಗರುಡ ಬರುವುದನ್ನೇ ಕಾದಿರುತ್ತಾರೆ. ಇವತ್ತು ಕೂಡಾ ರಥಕ್ಕೆ ಗರುಡ ಪ್ರದಕ್ಷಣೆ ಬಂದಿರುವ ದೃಶ್ಯವನ್ನು ನೋಡಿ ಭಕ್ತರು ಪುಳಕಿತರಾದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎಂ.ಪ್ರಭಾಕರ ಶೆಟ್ಟಿ, ದೇವಳದ ತಂತ್ರಿಗಳಾಗಿ ಪ್ರಸನ್ನ ಕುಮಾರ್ ಐತಾಳ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಗಣೇಶ್ ಗೌಡ, ಸಮಿತಿ ಸದಸ್ಯರಾಗಿ ಎಸ್.ರಾಘವೇಂದ್ರ ರಾವ್ ನೇರಂಬಳ್ಳಿ, ಸುರೇಶ್ ಶೇರೆಗಾರ್ ಬೀಜಾಡಿ, ಚಂದ್ರಿಕಾ ಧನ್ಯ ಕೋಟೇಶ್ವರ, ಶಾರದಾ ಮೂಡುಗೋಪಾಡಿ, ಮಂಜುನಾಥ ಆಚಾರ್ಯ, ಭಾರತಿ, ಹಾಗೂ ಅರ್ಚಕರು, ಸಿಬ್ಬಂದಿ ವರ್ಗ ಹಾಗು ಸಮಸ್ತ ಕೋಟೇಶ್ವರ ಗ್ರಾಮಸ್ಥರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.


ಕೊಡಿ ಹಬ್ಬ: ಕೋಟೇಶ್ವರದ ಸುತ್ತುಮುತ್ತಲಿನ ನವವಿವಾಹಿತರು ಬದುಕಿನ ಕುಡಿಯೊಡೆವ ಕ್ಷೇತ್ರವೆಂದೇ ನಂಬುಗೆ ತಳೆದವರಾಗಿ ಕೋಟಿತೀರ್ಥದಲ್ಲಿ ಸ್ನಾನಮಾಡಿ ದೇವರ ದರ್ಶನ ಪಡೆದು ಕಬ್ಬಿನ ಕೊಡಿಯನ್ನು ಒಟ್ಟಿಗೆ ಕೊಂಡೊಯ್ಯುತ್ತಾರೆ.


ಸುತ್ತಕ್ಕಿ ಸೇವೆ: ಸುಮಾರು 5 ಎಕರೆ ವಿಸ್ತೀರ್ಣದ ವಿಶಾಲವಾದ ಈ ಕೆರೆಗೆ ಸುತ್ತಕ್ಕಿ ತಳಿದರೆ ತಮ್ಮ ಇಷ್ಟಾರ್ಥ ಈಡೇರುತ್ತದೆ ಎಂಬ ನಂಬಿಕೆಯಿಂದ ಹಬ್ಬದ ದಿನ ಬೆಳಿಗ್ಗೆ 3 ಗಂಟೆಯಿಂದಲೇ ದೂರ ದೂರದ ಹರಕೆ ಹೊತ್ತ ಭಕ್ತಾಭಿಮಾನಿಗಳು ಕೆರೆಯಲ್ಲಿ ತೀರ್ಥ ಸ್ನಾನ ಮಾಡಿ ಮನೆಯಲ್ಲಿಯೇ ಬೆಳೆದ ಬತ್ತದ ಅಕ್ಕಿಯನ್ನು ಈ ಕೆರೆಯ ಸುತ್ತ ತಳಿಯುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು