7:36 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೃಷಿ ಕಾಯ್ದೆಗಳ ವಾಪಸ್; ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ: ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು

20/11/2021, 15:57

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com 

ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ. ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ . ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿದ್ದ ರೈತರ ಮೇಲಿನ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯಬೇಕು. ಈ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೇಂದ್ರ ಸರ್ಕಾರ ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. 

ದೇಶದ ಅನ್ನದಾತರು ಚಳಿ , ಮಳೆ , ಬಿಸಿಲೆನ್ನದೆ ಬೀದಿಗಿಳಿದು ಸುದೀರ್ಘ ಹೋರಾಟ ಮಾಡಿದ್ದರು . ಈ ಹೋರಾಟ ಹತ್ತಿಕ್ಕಲು ಸರ್ಕಾರ ಅಧಿಕಾರ , ಪೊಲೀಸ್ ಬಲ ಪ್ರಯೋಗಿಸಿತ್ತು . ಇದ್ಯಾವುದಕ್ಕೂ ಜಗ್ಗದ ರೈತರು ತಮ್ಮ ಭವಿಷ್ಯ ರಕ್ಷಣೆಗೆ ನಿಂತರು . ಈ ಹೋರಾಟದಲ್ಲಿ ೬೦೦ ಕ್ಕೂ ಹೆಚ್ಚು ರೈತರು ಪಾಣ ತ್ಯಾಗ ಮಾಡಿದ್ದು , ಕೇಂದ್ರ ಸರ್ಕಾರ ಇದೀಗ ಅನ್ನದಾತನ ಮುಂದೆ ಮಂಡಿಯೂರಿದೆ . ದೇಶದ ಅನ್ನದಾತನನ್ನು ಎದುರುಹಾಕಿಕೊಂಡು ಉಳಿದವರಿಲ್ಲ . ಹೋರಾಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ರೈತನೂ ದೇಶದ ರಕ್ಷಣೆಯಲ್ಲಿ ಯೋಧನಂತೆ ಕೆಲಸ ಮಾಡಿದ್ದಾರೆ . ಇದು ಸರ್ವಾಧಿಕಾರಿ ಧೋರಣೆ ವಿರುದ್ಧ ಪ್ರಜಾಪಭುತ್ವಕ್ಕೆ ಸಿಕ್ಕ ಗೆಲುವು .

ರೈತರ ಹಿತದೃಷ್ಟಿಯಿಂದ ಜೆಡಿಎಸ್ ಕೂಡ ರೈತರ ಈ ಹೋರಾಟಕ್ಕೆ ಬೆಂಬಲ ಸೂಚಿಸಿತ್ತು . ಕೇಂದ್ರ ಸರ್ಕಾರ ಇನ್ನು ಮುಂದಾದರು ತನ್ನ ಸರ್ವಾಧಿಕಾರಿ ಮನಃಸ್ಥಿತಿ ಯಿಂದ ಹೊರಬಂದು ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದನ್ನು ನಿಲ್ಲಿಸಬೇಕು . ದೇಶ ಹಾಗೂ ಅನ್ನದಾತನ ಹಿತದೃಷ್ಟಿಯಿಂದ ಎಲ್ಲರ ಜತೆ ಚರ್ಚೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ . ಜೆಡಿಎಸ್ ಪಕ್ಷ ಎಂದೆಂದಿಗೂ ರೈತರು ಸೇರಿದಂತೆ ಎಲ್ಲ ವರ್ಗವರ ಜತೆಗೆ ಇರಲಿದೆ . ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು , ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೂಡ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ . ಇನ್ನುಂದೆ ರೈತರ ಹಿತಾಸಕ್ತಿಗೆ ಧಕ್ಕೆಯಾದರೆ ಜೆಡಿಎಸ್ ಪಕ್ಷ ಹೋರಾಟ ಮಾಡಲಿದೆ ಎಂದೂ ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು