6:15 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಸ್ಕಿ: ಸತತ ಮಳೆಗೆ ನಾಶವಾದ ರೈತರ ಬೆಳೆಗೆ ಪರಿಹಾರ ನೀಡಲು ಸರಕಾರಕ್ಕೆ ಯುವ ಕಾಂಗ್ರೆಸ್ ಮನವಿ

20/11/2021, 20:54

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕಳೆದ ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು ರೈತರು ಬೆಳೆದ ಬೆಳೆಗಳು ನಾಶವಾಗಿವೆ. ರೈತರಿಗೆ ಕೂಡಲೇ ರಾಜ್ಯ ಸರ್ಕಾರ ಹೆಕ್ಟರ್ ಗೆ 30 ಸಾವಿರ ರೂ. ಪರಿಹಾರ ಘೋಷಣೆ ಮಾಡಬೇಕು ಹಾಗೂ ರೈತ ಬೆಳೆದ ಭತ್ತಕ್ಕೆ ಕ್ವಿಂಟಾಲ್ ಗೆ 2 ಸಾವಿರ ರೂ. ಬೆಂಬಲ ಬೆಲೆ ತಕ್ಷಣವೇ ಘೋಷಣೆ  ಮಾಡಬೇಕೆಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ್ ಬಾಗೋಡಿ ಹಾಗೂ ಕಿಸಾನ್ ಘಟಕದ ಅಧ್ಯಕ್ಷ ಮೈಬೂಬ್ ಸಾಬ್ ಮುದ್ದಾಪುರ್ ಒತ್ತಾಯಿಸಿದರು.

ಮಸ್ಕಿ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲೇ ಪರಿಹಾರ ಕೊಡದಿದ್ದಲ್ಲಿ ಮಸ್ಕಿ ತಾಲೂಕಿನಾದ್ಯಂತ ಉಗ್ರ ಹೋರಾಟ ಮಾಡಲಾಗುವುದು  ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಲನಗೌಡ ಸುಂಕನೂರ್,ಮಹಾಂತೇಶ್ ಮಲ್ಲನಗೌಡ ಗೋನಾಲ್,ಅಲಂಬಾಶ ಗೋನಾಳ,ಆನಂದ್ ಜೋಗಿ,ಚಂದಪಾಶ ಮಸ್ಕಿ,ಕೃಷ್ಣ ಚಿಗರಿ,ಮಾಳಿಂಗ ಕಡಬೂರ್,ದುರ್ಗಪ್ಪ ಇನ್ನಿತರರು ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು