2:15 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಡುಗೆ ಅನಿಲ ಕಾಳಸಂತೆಯಲ್ಲಿ ಮಾರಾಟ, ಅಕ್ರಮ ದಾಸ್ತಾನು; ಕರವೇ ಆರೋಪ

20/11/2021, 21:06

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಅಡುಗೆ ಅನಿಲವನ್ನು ಕಾಳಸಂತೆಯಲ್ಲಿ ಹಾಗೂ ನಿಗದಿತ ದರಕ್ಕಿಂತ ಅತಿ ಹೆಚ್ಚು ದರದಲ್ಲಿ ಮಾರಾಟದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ತಾಲೂಕಾಡಳಿತಕ್ಕೆ ದೂರು ನೀಡಲಾಯಿತು.ಕನ್ನಡರಕ್ಷಣ ವೇದಿಕೆ ಅಧ್ಯಕ್ಷ ಕಾಟೇರ ಹಾಲೇಶ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕರವೇ ಕಾಯಕರ್ತರು ತಹಶೀಲ್ದಾರ್ ಟಿ.ಜಗದೀಶ ಅವರಿಗೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ಕಾಟೇರ ಹಾಲೇಶ ಮಾತನಾಡಿ, ಅನಿಲ ಸಿಲಿಂಡರ್ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಹಾಗೂ ನಿಗದಿತ ದರಕ್ಕಿಂತ ಅತಿಹೆಚ್ಚು ದರಕ್ಕೆ ಮಾರಾಟ ಮಾಡಲಾಗುತ್ತಿದೆ.

ಸಂಬಂಧಿಸಿದ ಇಲಾಖಾಧಿಕಾರಿಗಳು ಕ್ರಮ ಜರುಗಿಸಿಲ್ಲ ಎಂದು ದೂರಿದ್ದಾರೆ. 

ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅನಧಿಕೃತವಾಗಿ ಅನಿಲ ತುಂಬಿದ ಸಿಲಿಂಡರ್ ಗಳನ್ನು ದಾಸ್ತಾನು ಮಾಡಲಾಗುತ್ತಿದೆ, ಈ ಮೂಲಕ ಜನರ ಜೀವದ ಜತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಅನಿಲ ಸಿಲಿಂಡರ್ ಅಕ್ರಮ ದಾಸ್ತಾನು  ಮತ್ತು ಮಾರಾಟ ಸಾಗಾಣಿಕೆ ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಗ್ರ‍ಾಮಗಳಲ್ಲಿ ಜರುಗುತ್ತಿದ್ದು,ಸಂಬಂಧಿಸಿದಂತೆ ಇಲಾಖಾಧಿಕಾರಿಗಳು ಬೆದರು ಗೊಂಬೆಗಳಂತೆ ವರ್ತಿಸುತ್ತಿದ್ದಾರೆ ಎಂದು ಹಾಲೇಶ ದೂರಿದ್ದಾರೆ. ಅಡುಗೆ ಅನಿಲ ಹೋಟೆಲ್ ಹಾಗೂ ಡಾಬಾ ಮತ್ತು ಖಾಸಗೀ ಯಾಗಿ ಬಳಕೆಗೆ ಮಾರಾಟ ಮಾಡಲಾಗುತ್ತಿದೆ. ಮನೆಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದೆ. ಅಕ್ರಮವಾಗಿ ಸಾಗಿಸಲಾಗುತ್ತಿದೆ ಹಾಗೂ ಕಾಳಸಂತೆಯಲ್ಲಿ ಮಾರಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಹಾಡಹಗಲೇ ಅನಿಲ ಸಿಲಿಂಡರ್ ಅಕ್ರಮ ಸಾಗಿಸುತ್ತಿದ್ದರೂ ಯಾರೂ ಕ್ರಮ ಜರುಗಿಸಲಾಗುತ್ತಿಲ್ಲ. ಈ ವಿಷಯದಲ್ಲಿ ಅವರು ಅಕ್ರಮ ಅನಿಲ ಸಿಲಿಂಡರ್ ದಾಸ್ತಾನು ಸಾಗಾಣಿಕೆ ಮಾರಾಟದಲ್ಲಿ ಜಾಣ ಕುರುಡುತನ ತೋರಿದ್ದು,ಈ ಮೂಲಕ ಅವರೂ ಈ ದಂಧೆಗೆ ಮೌನ ಸಮ್ಮತಿ ಸೂಚಿಸಿದ್ದಾರೆ. ಅದನ್ನು ಪರೋಕ್ಷವಾಗಿ ಅವರು ಒಪ್ಪಿಕೊಂಡಂತಾಗಿದೆ ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ ಅನಿಲ ತುಂಬಿರುವ ಸಿಲಿಂಡರ್ ಗಳನ್ನು  ಎಗ್ಗಿಲ್ಲದೇ ಸಾಗಿಸಲಾಗುತ್ತಿದೆ ಮತ್ತು ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದೆ. ಯ‍ಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ದಾಸ್ತಾನು ಮಾಡಲಾಗುತ್ತಿದ್ದು,ಇದು ಬಲು ಅಪಾಯಕಾರಿಯಾದ ಅಕ್ರಮ ದಂಧೆಯಾಗಿದೆ ಇಂತಹವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕಿದೆ ಎಂದು ದಲಿತ ಮುಖಂಡರಾದ ಗೆದ್ದಲಗಟ್ಟೆ ಹನುಮೇಶ ಒತ್ತಾಯಿಸಿದ್ದಾರೆ. ಮಾಜಿ ಸೈನಿಕ ರಮೇಶ ಸೇರಿದಂತೆ ತಾಲೂಕಿನ ವಿವಿದ ಭಾಗದ ವಿವಿದ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು