11:47 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಡುಗೆ ಅನಿಲ ಕಾಳಸಂತೆಯಲ್ಲಿ ಮಾರಾಟ, ಅಕ್ರಮ ದಾಸ್ತಾನು; ಕರವೇ ಆರೋಪ

20/11/2021, 21:06

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಅಡುಗೆ ಅನಿಲವನ್ನು ಕಾಳಸಂತೆಯಲ್ಲಿ ಹಾಗೂ ನಿಗದಿತ ದರಕ್ಕಿಂತ ಅತಿ ಹೆಚ್ಚು ದರದಲ್ಲಿ ಮಾರಾಟದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ತಾಲೂಕಾಡಳಿತಕ್ಕೆ ದೂರು ನೀಡಲಾಯಿತು.ಕನ್ನಡರಕ್ಷಣ ವೇದಿಕೆ ಅಧ್ಯಕ್ಷ ಕಾಟೇರ ಹಾಲೇಶ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕರವೇ ಕಾಯಕರ್ತರು ತಹಶೀಲ್ದಾರ್ ಟಿ.ಜಗದೀಶ ಅವರಿಗೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ಕಾಟೇರ ಹಾಲೇಶ ಮಾತನಾಡಿ, ಅನಿಲ ಸಿಲಿಂಡರ್ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಹಾಗೂ ನಿಗದಿತ ದರಕ್ಕಿಂತ ಅತಿಹೆಚ್ಚು ದರಕ್ಕೆ ಮಾರಾಟ ಮಾಡಲಾಗುತ್ತಿದೆ.

ಸಂಬಂಧಿಸಿದ ಇಲಾಖಾಧಿಕಾರಿಗಳು ಕ್ರಮ ಜರುಗಿಸಿಲ್ಲ ಎಂದು ದೂರಿದ್ದಾರೆ. 

ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅನಧಿಕೃತವಾಗಿ ಅನಿಲ ತುಂಬಿದ ಸಿಲಿಂಡರ್ ಗಳನ್ನು ದಾಸ್ತಾನು ಮಾಡಲಾಗುತ್ತಿದೆ, ಈ ಮೂಲಕ ಜನರ ಜೀವದ ಜತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಅನಿಲ ಸಿಲಿಂಡರ್ ಅಕ್ರಮ ದಾಸ್ತಾನು  ಮತ್ತು ಮಾರಾಟ ಸಾಗಾಣಿಕೆ ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಗ್ರ‍ಾಮಗಳಲ್ಲಿ ಜರುಗುತ್ತಿದ್ದು,ಸಂಬಂಧಿಸಿದಂತೆ ಇಲಾಖಾಧಿಕಾರಿಗಳು ಬೆದರು ಗೊಂಬೆಗಳಂತೆ ವರ್ತಿಸುತ್ತಿದ್ದಾರೆ ಎಂದು ಹಾಲೇಶ ದೂರಿದ್ದಾರೆ. ಅಡುಗೆ ಅನಿಲ ಹೋಟೆಲ್ ಹಾಗೂ ಡಾಬಾ ಮತ್ತು ಖಾಸಗೀ ಯಾಗಿ ಬಳಕೆಗೆ ಮಾರಾಟ ಮಾಡಲಾಗುತ್ತಿದೆ. ಮನೆಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದೆ. ಅಕ್ರಮವಾಗಿ ಸಾಗಿಸಲಾಗುತ್ತಿದೆ ಹಾಗೂ ಕಾಳಸಂತೆಯಲ್ಲಿ ಮಾರಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಹಾಡಹಗಲೇ ಅನಿಲ ಸಿಲಿಂಡರ್ ಅಕ್ರಮ ಸಾಗಿಸುತ್ತಿದ್ದರೂ ಯಾರೂ ಕ್ರಮ ಜರುಗಿಸಲಾಗುತ್ತಿಲ್ಲ. ಈ ವಿಷಯದಲ್ಲಿ ಅವರು ಅಕ್ರಮ ಅನಿಲ ಸಿಲಿಂಡರ್ ದಾಸ್ತಾನು ಸಾಗಾಣಿಕೆ ಮಾರಾಟದಲ್ಲಿ ಜಾಣ ಕುರುಡುತನ ತೋರಿದ್ದು,ಈ ಮೂಲಕ ಅವರೂ ಈ ದಂಧೆಗೆ ಮೌನ ಸಮ್ಮತಿ ಸೂಚಿಸಿದ್ದಾರೆ. ಅದನ್ನು ಪರೋಕ್ಷವಾಗಿ ಅವರು ಒಪ್ಪಿಕೊಂಡಂತಾಗಿದೆ ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ ಅನಿಲ ತುಂಬಿರುವ ಸಿಲಿಂಡರ್ ಗಳನ್ನು  ಎಗ್ಗಿಲ್ಲದೇ ಸಾಗಿಸಲಾಗುತ್ತಿದೆ ಮತ್ತು ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದೆ. ಯ‍ಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ದಾಸ್ತಾನು ಮಾಡಲಾಗುತ್ತಿದ್ದು,ಇದು ಬಲು ಅಪಾಯಕಾರಿಯಾದ ಅಕ್ರಮ ದಂಧೆಯಾಗಿದೆ ಇಂತಹವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕಿದೆ ಎಂದು ದಲಿತ ಮುಖಂಡರಾದ ಗೆದ್ದಲಗಟ್ಟೆ ಹನುಮೇಶ ಒತ್ತಾಯಿಸಿದ್ದಾರೆ. ಮಾಜಿ ಸೈನಿಕ ರಮೇಶ ಸೇರಿದಂತೆ ತಾಲೂಕಿನ ವಿವಿದ ಭಾಗದ ವಿವಿದ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು