3:38 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಪ್ರಾಥಮಿಕ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸುಗಮ: ಸ್ಥಳದಲ್ಲೇ ಆದೇಶಪತ್ರ ವಿತರಿಸಿದ ಡಿಡಿಪಿಐ 

21/11/2021, 09:59

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನಗರದ ಡಿಡಿಪಿಐ ಕಚೇರಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆದಿದೆ.

ಪ್ರಕ್ರಿಯೆಯಲ್ಲಿ 10 ಮಂದಿ ಭಾಗವಹಿಸಿದ್ದು , ಸ್ಥಳದಲ್ಲೇ ಡಿಡಿಪಿಐ ರೇವಣಸಿದ್ದಪ್ಪ ವರ್ಗಾವಣೆ ಆದೇಶ ವಿತರಿಸಿದರು. ಜಿಲ್ಲೆಯಲ್ಲಿ ಪಾಥಮಿಕ ಶಾಲಾ ವಿಭಾಗದಿಂದ 20 ಮಂದಿ ಪರಸ್ಪರ ವರ್ಗಾವಣೆಗೆ ಅರ್ಜಿ ಹಾಕಿದ್ದು , 12 ಮಂದಿ ಹಾಜರಾಗಿದ್ದರು ಮತ್ತು 10 ಮಂದಿ ವರ್ಗಾವಣೆ ಆದೇಶ ಪಡೆದುಕೊಂಡರು. ವಿಕಲಚೇತನರೊಬ್ಬರು ಸ್ಥಳ ಆಯ್ಕೆ ಮಾಡಿಕೊಂಡಿದ್ದು , ಡಿಡಿಪಿಐ ರೇವಣಸಿದ್ದಪ್ಪ , ಶಿಕ್ಷಣಾಧಿಕಾರಿಗಳಾದ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್.ಅಶೋಕ್ ಅವರಿದ್ದ ಸ್ಥಳಕ್ಕೆ ಹೋಗಿ ಆದೇಶ ವಿತರಿಸಿದರು . 

ಡಿಡಿಪಿಐ ರೇವಣ ಸಿದ್ದಪ್ಪ ಈ ಸಂದರ್ಭದಲ್ಲಿ ಮಾತನಾಡಿ , ವರ್ಗಾವಣೆಯಾಗಿರುವ ಶಿಕ್ಷಕರು ಸಮಯಪಜ್ಜೆಯಿಂದ ವರ್ತಿಸಿ , ಸಕಾಲಕ್ಕೆ ಹೋಗಿ ಶಾಲೆಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದರು . 

ವರ್ಗಾವಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು , ಶಿಕ್ಷಕರನ್ನು ಅಲೆಸದೇ ಸ್ಥಳದಲ್ಲೇ ವರ್ಗಾವಣೆ ಆದೇಶ ಪತ ವಿತರಿಸಲಾಗಿದೆ ಎಂದು ತಿಳಿಸಿದರು .

ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್‌.ಅಶೋಕ್‌ , ಪಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪಧಾನ ಕಾರ್ಯದರ್ಶಿ ಎಂ.ನಾಗರಾಜ್ ಎಷಯ ಪರಿವೀಕ್ಷಕ ಕೃಷ್ಣಪ್ಪ , ಅಧೀಕ್ಷಕರಾದ ಮಂಜುನಾಥರೆಡ್ಡಿ ಗೋವಿಂದಗೌಡ , ಸಿಬ್ಬಂದಿ ಚಿರಂಜೀವಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು