6:42 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ವತಿಯಿಂದ 101 ಆಹಾರ ಕಿಟ್: ಗಚ್ಚಿ ಮಠದ ವರರುದ್ರಮುನಿ ಶಿವಾಚಾರ್ಯ ವಿತರಣೆ

30/05/2021, 14:22

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿಯ ಶ್ರೀ ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಖಾಸಗಿ ಕಾಲೇಜು ಉಪನ್ಯಾಸಕರಿಗೆ, ಹೈಸ್ಕೂಲ್ ಶಿಕ್ಷಕರಿಗೆ, ಪ್ರೈಮರಿ ಶಿಕ್ಷಕರಿಗೆ  ಮತ್ತು ಬಡ ಕುಟುಂಬಗಳಿಗೆ 101 ಆಹಾರದ ಕಿಟ್ ಗಳನ್ನು ಗಚ್ಚಿನ ಮಠ ಶ್ರೀ ವರರುದ್ರಮುನಿ ಸ್ವಾಮಿಗಳು, ಪ್ರತಾಪ್‌ ಗೌಡ ಪಾಟೀಲ್ ಮಸ್ಕಿ ಮತ್ತು ಬ್ಯಾಂಕ್ ನ ಅಧ್ಯಕ್ಷ ಸೂಗಣ್ಣ ಬಾಳೇಕಾಯಿ ಮಸ್ಕಿ ವಿತರಿಸಿದರು. 

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶ್ರೀ ಶಾರದಾ ಪ್ರೌಢ ಶಾಲೆ ಮುಖ್ಯಗುರುಗಳಾದ ಮಲ್ಲಿಕಾರ್ಜುನ್ ಹಿರೇಮಠ ಅವರು, ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಬಡವರಿಗೆ, ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಆಹಾರದ ಕಿಟ್ ಗಳನ್ನು ವಿತರಿಸುವ ಇಂತಹ ಸಹಕಾರಿ ನಿಯಮಿತ ಸಂಸ್ಥೆಗಳನ್ನು ನೋಡುವುದು ಇದೇ ಮೊದಲು ಎಂದರು.

ಈ ಕಾರ್ಯಕ್ರಮದಲ್ಲಿ ಗುರುರಾಜ ಹಂಚಿನಾಳ, 

ಸುರೇಶ ಅರಳಿ,  ಸಂತೋಷ ಬಾಳೇಕಾಯಿ, 

ಬಸವರಾಜ ಬುಕ್ಕಣ್ಣ,  ಬಸವರಾಜ ನಾಯಕ ಕಡಬೂರು ಹಾಗೂ ಬ್ಯಾಂಕ್ ನ  ಎಲ್ಲ ಪದಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು 101 ಆಹಾರದ ಕಿಟ್ ಗಳನ್ನು ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು