12:15 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕೆಸರುಗದ್ದೆಯಾದ ಚಳ್ಳಕೆರೆ ವಾರದ ಸಂತೆ ಮೈದಾನ: ತಕ್ಷಣ ದುರಸ್ತಿಗೆ ಶಾಸಕರ ಸೂಚನೆ

21/11/2021, 16:08

ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com

ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿರುವ ಜತೆಗೆ ಚಳ್ಳಕೆರೆಯಲ್ಲಿ ವಾರದ ಸಂತೆಯಾಗುವ ಮೈದಾನ ಕೆಸರು ಗದ್ದೆಯಾಗಿದ್ದು ಕೂಡಲೆ ಅಧಿಕಾರಿಗಳು ಸರಿಪಡಿಸುವಂತೆ ಶಾಸಕ ಟಿ.ರಘುಮೂರ್ತಿ ತಾಕೀತು ಮಾಡಿದರು.

ಕೆಸರು ಗದ್ದೆಯಾದ ವರದ ಸಂತೆ ಮೈದಾನ ಸಾರ್ವಜನಿಕರು ಹಾಗೂ ವರ್ತಕರು ಅಧಿಕಾರಿಗಳ ವಿರುದ್ದ  ಅಕ್ರೋಶ ವ್ಯಕ್ತಪಡಿಸಿ ಶಾಸರಿಗೆ ದೂರು ನೀಡಿದ ಬೆನ್ನಲ್ಲೇ ಬೆಳ್ಳಂ ಬೆಳಗ್ಗೆ ವಾರದ ಸಂತೆ ಮೈದಾನಕ್ಕೆ ಶಾಸಕ ಟಿ.ರಘುಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿ ಕೂಡಲೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಂತೆ ಮೈದಾನದಲ್ಲಿ ವರ್ತಕರು ವ್ಯಾಪಾರ ಮಾಡುವ ಸ್ಥಳಕ್ಕೆ ಹೊಂದಿಕೊಂಡಿರುವ ಶಿಥಿಲವಾದ ಕಟ್ಟಡಗಳನ್ನು ಕೂಡಲೆ ತೆರವುಗೊಳಿಸಿ ಸಂತೆ ಮೈದಾನಕ್ಕೆ ಜಲ್ಲಿ, ಮಣ್ಣು ಹಾಕಿ ನೀರು ನಿಲ್ಲದಂತೆ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರಭೆ ಪೌರಾಯುಕ್ತ ಪಾಲಯ್ಯ ಮಾತನಾಡಿ ಬಾಡಿಗೆದಾರರು ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ಅವುಗಳ ತೆರವಿಗೆ ಅಡ್ಡಿಯಾಗಿದೆ. ಈ ದಿನವೇ ಸಂತೆ ಮೈದಾನಕ್ಕೆ ಮಣ್ಣು ಹಾಗೂ ಜಲ್ಲಿ ಹಾಕಿಸಿ ನೀರು ನಿಲ್ಲದಂತೆ ಮಾಡಲಾಗುವುದು ಎಂದರು.

ಶಾಸಕ ಟಿ.ರಘುಮೂರ್ತಿ ಮಾತನಾಡಿ ಸರಕಾರಿ ವಾಣಿಜ್ಯ ಮಳಿಗೆಗಳನ್ನು ಖಾಸಗಿಯವರು ಕೋರ್ಟ್ ಗೆ ಹಾಕಿದ ತಕ್ಷಣ ಸುಮ್ಮನೆ ಕೈಕಟ್ಟಿ ಕೂರುವ ಬದಲು  ಜನರ ಮೇಲೆ ಗೋಡೆ ಬಿದ್ದು ಪ್ರಾಣ ಕಳೆದುಕೊಳ್ಳುವ ಮುನ್ನ ನುರಿತ ವಕೀಲರ ಮೂಲಕ ನ್ಯಾಯಾದಲ್ಲಿ ಪ್ರಕರಣ ಇತ್ಯರ್ಥ ಮಾಡಿ ಶಿಥಿಲವಾದ ಕಟ್ಟಡಗಳನ್ನು ನೆಲಸಮ 

ಮಾಡಬೇಕು. ಪ್ರಮುಖ ರಸ್ತೆ ಸೇರಿದಂತೆ ತಗ್ಗು ಪ್ರದೇಶದಲ್ಲಿ ನೀರು ನಿಲ್ಲದಂತೆ ರಾಜಕಾಲುವೆ,  ಚರಂಡಿಗಳಲ್ಲಿನ ಹೂಳು ತೆಗೆಸಿ ನೀರು ಸರಾಗವಾಗಿ ಚರಂಡಿ ಮೂಲಕ ಹರಿಯುವಂತೆ 

ಮಾಡಬೇಕು ಎಂದರು.

ನಗರದ ವಿವಿಧ ಬಡಾವಣೆಗೆಳಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಕೆರೆ, ಕಾಲುವೆ, ಚೆಕ್ ಡ್ಯಾಂ, ವೇದಾವತಿ ನದಿಯಲ್ಲಿ ನೀರು ಹರಿಯುತ್ತಿದ್ದು, ನೀರು ಹರಿಯುವ ಸ್ಥಳಗಳ ಸಮೀಪದ ಜನರು ತಮ್ಮ ಮಕ್ಕಳನ್ನು ನೀರಿನ ಬಳಿ ಬಿಡದಂತೆ ಹಾಗೂ ಶಿಥಿಲವಾದ ಮನೆಗಳಲ್ಲಿ ಯಾರು ವಾಸ ಮಾಡಬಾರದು ಶಿಥಿಲವಾದ ಕಟ್ಟಗಳಲ್ಲಿ ವಾಸ ಮಾಡುವ ಕುಟುಂಬಗಳಿಗೆ ಶಾಲೆ, ಸಮುದಾಯ ಭವನಗಳಲ್ಲಿ ತಾತ್ಕಲಿಕವಾಗಿ ವಸತಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಶಾಸಕ ಟಿ.ರಘುಮೂರ್ತಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗೌಡ, ಸದಸ್ಯರಾದ ಎಂ.ಜೆ.ರಾಘವೇಂದ್ರ, ವೀರಭದ್ರಪ್ಪ, ಮಂಜುಳ ಪ್ರಸನ್ನಕುಮಾರ್, ಇಂಜಿಯರ್ ಲೋಕೇಶ್ ಸೇರಿದಂತೆ ಇತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು