12:43 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ನಿಂದ ದೈವ ನರ್ತಕರಿಗೆ, ಸಹಾಯಕರಿಗೆ ಹಾಗೂ ಸೇವಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

30/05/2021, 14:26

ಉಡುಪಿ(reporterkarnataka news): ಕೊರೊನಾ ಮಹಾಮಾರಿ ಶ್ರೀಮಂತ – ಬಡವರೆನ್ನದೆ ಎಲ್ಲರಿಗೂ ಕಾಡಿದೆ. ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೊನಾ ಭಾರೀ ಕಷ್ಟ ನೀಡಿದೆ. ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ. ತುಳುನಾಡಿನಲ್ಲಿ ಸದ್ಯ ಕೊರೊನಾ ಹಿನ್ನಲೆಯಲ್ಲಿ ಎಲ್ಲಿಯೂ ದೈವಾರಾಧನೆ ನಡೆಯುತ್ತಿಲ್ಲ. ಈ ಹಿನ್ನಲೆಯಲ್ಲಿ ದೈವ ನರ್ತನ ಕಾರ್ಯವನ್ನು ಮಾಡುವ ಹಾಗೂ ದೈವದ ಚಾಕರಿಯನ್ನು ಮಾಡುವ ಹಿರಿಯಡ್ಕ ಪರಿಸರದ ಸುಮಾರು 20 ಕುಟುಂಬಗಳಿಗೆ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ತಲಾ 10 ಕೆಜಿ ಅಕ್ಕಿ ಹಾಗೂ ಒಂದು ಸಾವಿರ ರೂಪಾಯಿ ಮೌಲ್ಯದ ಅಗತ್ಯ ದಿನಸಿ ಸಾಮಗ್ರಿಗಳನ್ನು ನೀಡಲಾಯಿತು.

ಕೊರೊನಾ ಮಹಾಮಾರಿಯಿಂದ ನೇಮೋತ್ಸವ ನಡೆಯುವ ಈ ಸಮಯದಲ್ಲಿ ನೇಮೋತ್ಸವವಿಲ್ಲದೆ ಅದನ್ನೇ ನಂಬುತ್ತಿರುವ ಕುಟುಂಬಗಳು ಬಹಳ ಕಷ್ಟದಲ್ಲಿದೆ. ಹಾಗಾಗಿ ಅವರ ಕಷ್ಟದ ಸಮಯದಲ್ಲಿ ಅವರು ನೇಮ ಕಟ್ಟುವ ಮನೆಯವರು ಅವರೊಂದಿಗಿದ್ದು ಅವರ ಕಷ್ಟದಲ್ಲಿ ಭಾಗಿಗಳಾಗಬೇಕೆಂದು ಆಶಿಸಿ ಟ್ರಸ್ಟ್ ನ ಅಧ್ಯಕ್ಷರಾದ ಅನಂತ ಇನ್ನಂಜೆ ಅವರು ಆಹಾರ ಕಿಟ್ ಗಳನ್ನು ವಿತರಿಸಿದರು‌.

ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿಗಳಾದ ಅನಿಲ್ ಆಚಾರ್ಯ ಓಂತಿಬೆಟ್ಟು , ಪುನೀತ್ ಕುಲಾಲ್ ಮಜೂರು , ವಿಕಾಸ್ ದೇವಾಡಿಗ ಮಜೂರು , ಶಿವು ಮಜೂರು ,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು