5:56 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಗುರುಪುರ ಕೈಕಂಬ: ಇಂದಿನಿಂದ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ; ಸಮಾರೋಪಕ್ಕೆ ಮಾಜಿ ಸಚಿವೆ ಶೈಲಜಾ ಟೀಚರ್

22/11/2021, 09:33

ಮಂಗಳೂರು(reporterkarnataka.com): ಸಿಪಿಎಂ ಪಕ್ಷದ ಎರಡು ದಿನಗಳ 23ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ ನವಂಬರ್ 22, 23 ರಂದು ಗುರುಪುರ ಕೈಕಂಬದ ಪ್ರಿಮೀಯರ್ ಸಭಾಂಗಣದ ವೇದಿಕೆಯಲ್ಲಿ ನಡೆಯಲಿದೆ.

ಪ್ರಸಕ್ತ ರಾಜಕೀಯ, ಸಾಮಾಜಿಕ ವಿದ್ಯಮಾನ, ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮ್ಮೇಳನ ಚರ್ಚಿಸಲಿದೆ. ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರಗಳು ಹೆಚ್ಚು ಹೆಚ್ಚು ವ್ಯಾಪಾರೀಕರಣ ಗೊಳ್ಳುತ್ತಿರುವುರಿಂದ ಉಂಟಾಗಿರುವ ಬಿಕ್ಕಟ್ಟು, ಆಳಗೊಳ್ಳುತ್ತಿರುವ ರೈತ, ಕಾರ್ಮಿಕರ ಬವಣೆಗಳು, ತೀವ್ರಗೊಳ್ಳುತ್ತಿರುವ ನಿರುದ್ಯೋಗದ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದೆ ನಡೆಸಬೇಕಾಗಿರುವ ಹೋರಾಟಗಳ ರೂಪುರೇಷೆಗಳ ಕುರಿತಾದ ನಿರ್ಣಯಗಳು ಸಮ್ಮೇಳನದಲ್ಲಿ ಚರ್ಚೆಗೊಳಗಾಗಲಿವೆ. ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಯ್ಕೆಯಾದ 180 ಸಂಗಾತಿಗಳು ಪ್ರತಿನಿಧಿಗಳಾಗಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. 

ನವಂಬರ್ 22 ರ ಬೆಳಿಗ್ಗೆ 10. 30ಕ್ಕೆ ಸಿಪಿಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜು ಸಮ್ಮೇಳನ

ಉದ್ಘಾಟಿಸಲಿದ್ದಾರೆ‌. ಹಿರಿಯ ಕಾರ್ಮಿಕ ನಾಯಕ ಯು. ಬಿ. ಲೋಕಯ್ಯ ಧ್ವಜಾರೋಹಣದ ಮೂಲಕ ಸಮ್ಮೇಳನದ ಪ್ರಕ್ರಿಯೆಗಳಿಗೆ ಚಾಲನೆ ನೀಡಲಿದ್ದಾರೆ. ನವಂಬರ್ 23 ರ ಸಂಜೆ 3. 00 ಗಂಟೆಗೆ ಪೊಳಲಿ ದ್ವಾರದ ಬಳಿಯಿಂದ ಸಾವಿರಾರು ಕಾರ್ಯಕರ್ತರ ಬೃಹತ್ ಮೆರವಣಿಗೆ ನಡೆಯಲಿದ್ದು, 4 .00 ಗಂಟೆಗೆ ಕೈಕಂಬದ ಪ್ರಿಮೀಯರ್  ಮೈದಾನದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. 

ಸಿಪಿಎಂ ಕೇಂದ್ರ ಸಮಿತಿ ಸದಸ್ಯರಾಗಿರುವ ಕೇರಳದ ಮಾಜಿ ಆರೋಗ್ಯ ಸಚಿವೆ ಕೆ. ಕೆ .ಶೈಲಜಾ ಟೀಚರ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಸ್ವಾಗತ ಸಮಿತಿಯ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು