7:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಗುರುಪುರ ಕೈಕಂಬ: ಇಂದಿನಿಂದ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ; ಸಮಾರೋಪಕ್ಕೆ ಮಾಜಿ ಸಚಿವೆ ಶೈಲಜಾ ಟೀಚರ್

22/11/2021, 09:33

ಮಂಗಳೂರು(reporterkarnataka.com): ಸಿಪಿಎಂ ಪಕ್ಷದ ಎರಡು ದಿನಗಳ 23ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ ನವಂಬರ್ 22, 23 ರಂದು ಗುರುಪುರ ಕೈಕಂಬದ ಪ್ರಿಮೀಯರ್ ಸಭಾಂಗಣದ ವೇದಿಕೆಯಲ್ಲಿ ನಡೆಯಲಿದೆ.

ಪ್ರಸಕ್ತ ರಾಜಕೀಯ, ಸಾಮಾಜಿಕ ವಿದ್ಯಮಾನ, ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮ್ಮೇಳನ ಚರ್ಚಿಸಲಿದೆ. ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರಗಳು ಹೆಚ್ಚು ಹೆಚ್ಚು ವ್ಯಾಪಾರೀಕರಣ ಗೊಳ್ಳುತ್ತಿರುವುರಿಂದ ಉಂಟಾಗಿರುವ ಬಿಕ್ಕಟ್ಟು, ಆಳಗೊಳ್ಳುತ್ತಿರುವ ರೈತ, ಕಾರ್ಮಿಕರ ಬವಣೆಗಳು, ತೀವ್ರಗೊಳ್ಳುತ್ತಿರುವ ನಿರುದ್ಯೋಗದ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದೆ ನಡೆಸಬೇಕಾಗಿರುವ ಹೋರಾಟಗಳ ರೂಪುರೇಷೆಗಳ ಕುರಿತಾದ ನಿರ್ಣಯಗಳು ಸಮ್ಮೇಳನದಲ್ಲಿ ಚರ್ಚೆಗೊಳಗಾಗಲಿವೆ. ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಯ್ಕೆಯಾದ 180 ಸಂಗಾತಿಗಳು ಪ್ರತಿನಿಧಿಗಳಾಗಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. 

ನವಂಬರ್ 22 ರ ಬೆಳಿಗ್ಗೆ 10. 30ಕ್ಕೆ ಸಿಪಿಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜು ಸಮ್ಮೇಳನ

ಉದ್ಘಾಟಿಸಲಿದ್ದಾರೆ‌. ಹಿರಿಯ ಕಾರ್ಮಿಕ ನಾಯಕ ಯು. ಬಿ. ಲೋಕಯ್ಯ ಧ್ವಜಾರೋಹಣದ ಮೂಲಕ ಸಮ್ಮೇಳನದ ಪ್ರಕ್ರಿಯೆಗಳಿಗೆ ಚಾಲನೆ ನೀಡಲಿದ್ದಾರೆ. ನವಂಬರ್ 23 ರ ಸಂಜೆ 3. 00 ಗಂಟೆಗೆ ಪೊಳಲಿ ದ್ವಾರದ ಬಳಿಯಿಂದ ಸಾವಿರಾರು ಕಾರ್ಯಕರ್ತರ ಬೃಹತ್ ಮೆರವಣಿಗೆ ನಡೆಯಲಿದ್ದು, 4 .00 ಗಂಟೆಗೆ ಕೈಕಂಬದ ಪ್ರಿಮೀಯರ್  ಮೈದಾನದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. 

ಸಿಪಿಎಂ ಕೇಂದ್ರ ಸಮಿತಿ ಸದಸ್ಯರಾಗಿರುವ ಕೇರಳದ ಮಾಜಿ ಆರೋಗ್ಯ ಸಚಿವೆ ಕೆ. ಕೆ .ಶೈಲಜಾ ಟೀಚರ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಸ್ವಾಗತ ಸಮಿತಿಯ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು