5:23 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು…

ಇತ್ತೀಚಿನ ಸುದ್ದಿ

ವಿಜಯನಗರ: ಭಕ್ತಿ- ಶ್ರದ್ಧೆಯಿಂದ ಗೌರಿದೇವಿ ಹಬ್ಬ ಆಚರಣೆ; ಬಾಲೆಯರಿಗೆ ಸೀರೆ ಉಡಿಸಿ ಅಲಂಕಾರ

22/11/2021, 11:22

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಸೇರಿದಂತೆ ಹಲವೆಡೆಗಳಲ್ಲಿ  ಶಕ್ತಿದಾತೆ ಹಾಗೂ ಬುದ್ದಿದಾತೆ ಶ್ರೀಗೌರಿದೇವಿಯ ಆರಾಧನೆ ನಡೆಯಿತು.

ಮಕ್ಕಳು, ರೈತರು ಹಾಗೂ ರೈತ ಹೆಂಗಳೆಯರ ಗ್ರಾಮೀಣ ಪ್ರದೇಶದ ವಿಶೇಷ ಹಬ್ಬ ಗೌರಿದೇವಿ ಹಬ್ಬವಾಗಿದೆ. ಗೌರಿ ಹುಣ್ಣಿಮೆಯಂದು ಪ್ರತಿಷ್ಟಾಪಿಸಲ್ಪಡುವ ಗೌರಿ, ಮೂರು ದಿನಗಳ ಕಾಲ ಆರಾಧಿಸಲ್ಪಡುತ್ತಾಳೆ. ನಂತರ  ಮೂರನೇ ದಿನದಂದು ಹೆಣ್ಣು ಮಕ್ಕಳು ಅಥವಾ ಕನ್ಯೆಯರು ಗೌರಿಯನ್ನ ಸಕ್ಕರೆ ಆರತಿ ಬೆಳಗುವುದರೊಂದಿಗೆ ವಿಧಿವತ್ತಾಗಿ  ಆರಾಧಿಸಿ ಹಬ್ಬ ಆಚರಿಸುತ್ತಾರೆ. ಸ್ಥಳೀಯ ಹಿರಿಯರು ರಾತ್ರಿಹೊತ್ತಿನವರೆಗೆ ಭಜನೆ ವಿಶೇಷ ಪೂಜೆಗಳನ್ನು ಆಚರಿಸಿ ನಂತರ ತಡರಾತ್ರಿ ಗೌರಿಯನ್ನು ವಿಧಿವತ್ತಾಗಿ ಗಂಗೆ ಕಾಣಿಸುವುದೆ ಮೂಲಕ ಗೌರಿಹಬ್ಬಕ್ಕೆ ಅಂತ್ಯವಾಡುತ್ತಾರೆ.

ಗೌರಿಹಬ್ಬ ಎಂದಾಕ್ಷಣ ಗೌರಿ ಮಕ್ಕಳು ಸಹಜವಾಗಿಯೇ ನೆನಪಾಗುತ್ತಾರೆ. ಬಾಲೆಯರು ಕುವರಿಯರು, ಅವರಮ್ಮಂದಿರು ಉಡಿಸಿದ ಸೀರೆಯಲ್ಲಿ ಸಾಕ್ಷಾತ್ ಗೌರಿಯಂತೆ ಗೋಚರಿಸುತ್ತಾರೆ. ಹಾಗಾಗಿ ಗ್ರಾಮೀಣ ಪ್ರದೇಶದಲ್ಲಿ ಗೌರಿಹುಡಿಗೇರು ಗೌರಿ ಮಕ್ಕಳು ಎಂದು ಕರೆಸಿಕೊಳ್ಳುತ್ತಾರೆ ಕನ್ಯೆಯರು. ಗೌರಿಹಬ್ಬ ರೈತಾಪಿಗರ ಗ್ರಾಮೀಣ ಜನರ ಹೆಂಗಳಯರ ಹೆಣ್ಣು ಮಕ್ಕಳ ಹಾಗೂ ಕನ್ಯಾಮಣಿಗಳ ಬಹುಪ್ರಿಯವಾದ ಹಬ್ಬವಾಗಿದೆ.ಹಲವೆಡೆಗಳಲ್ಲಿ ಗೌರಿ ಹಬ್ಬದ ಸಮಯದಲ್ಲಿ ಹಿರಿಯೆ ಹಬ್ಬ ಆಚರಿಸಲಾಗುತ್ತದೆ. ಮನೆಮಂದಿಯಲ್ಲಾ ಮಡಿ ಮುಡಿಯಿಂದ ಹಾಗೂ ಸಿಹಿಖಾದ್ಯಗಳ ಭೂರಿ ಭೋಜನ ತಾಯಾರಿಸಿ, ಮನೆಯ ಹಿರಿಯರಿಗೆ ಹೆಂಗಸರು ಮಕ್ಕಳು ವೃದ್ಧರಾದಿಯಾಗಿ ಹೊಚ್ಚ ಹೊಸ ಬಟ್ಟೆಗಳನ್ನು ಧರಿಸಿ ಕಾಲನ ಕರೆಗೆ ಓಗೊಟ್ಟು ಇಹಲೋಕ ತೊರೆದ ಮನೆಯ ಹಿರಿಯರ ಹೆಸರಲ್ಲಿ ಬಟ್ಟೆ ಸಮೇತ ಅವರ ಇಷ್ಟದಡಿಗೆ ಮಾಡಿ ಎಡೆಮಾಡುತ್ತಾರೆ.ಈ ಮೂಲಕ ಹಿರಿಯರ ಹಾಗೂ ಕಿರಿಯರ ಬಹುಪ್ರಿಯವಾದ ಹಬ್ಬ,ರೈತಾಪಿ ಜನರ ಗ್ರಾಮೀಣ ಜಾನಪದ ಹಬ್ಬ ಸಕ್ಕರೆ ಆರತಿಯ ಹಬ್ಬ ಶ್ರೀಗೌರಿಹಬ್ಬವಾಗಿದೆ. ಹಬ್ಬವನ್ನು ವಿಜಯನಗರ ಜಿಲ್ಲೆಯಾದ್ಯಾಂತ ಬಹು ಅರ್ಥಪೂರ್ಣವಾಗಿ, ಸಾಂಪ್ರದಾಯಿಕವಾಗಿ ಶಾಸ್ತ್ರೋಕ್ತವಾಗಿ ಶ್ರದ್ಧೆ ಭಕ್ತಿಯಿಂದ ಆಚರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು