9:14 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು ಏರ್ ಪೋರ್ಟ್ ಶ್ವಾನ ದಳದ  ಲೀನಾ ಇನ್ನಿಲ್ಲ: ಸಕಲ ಗೌರವದೊಂದಿಗೆ ಅಂತ್ಯಕ್ರಿಯೆ 

22/11/2021, 14:54

ಮಂಗಳೂರು(reporterkarnataka.com): ಇಡೀ ಕಡಲನಗರಿ ಯನ್ನೇ ಒಂದು ದಿನ ಪೂರ್ತಿ ತುದಿಗಾಲಿನಲ್ಲಿ ನಿಲ್ಲಿಸಿದ್ದ ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣವನ್ನು ಬೇಧಿಸಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐ ಎಸ್ ಎಫ್)ಯ ಶ್ವಾನ ಲೀನಾ(8) ಅನಾರೋಗ್ಯದಿಂದ ಕೊನೆಯುಸಿರೆಳೆದಿದೆ. ಸಕಲ ಸೇನಾ ಗೌರವದೊಂದಿಗೆ ಮೃತ ಲೀನಾಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.


ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಲೀನಾಳ ಅಂತ್ಯ ಸಂಸ್ಕಾರ ನಡೆಸಲಾಯಿತು. ಹೂವಿನಿಂದ ಅಲಂಕರಿಸಿದ ಪೆಟ್ಟಿಗೆಯಲ್ಲಿ ಇರಿಸಿ ಲೀನಾಳನ್ನು ತರಲಾಯಿತು.

2013 ಮೇ 5ರಂದು ಜನಿಸಿದ ಲೀನಾಗೆ ರಾಂಚಿಯಲ್ಲಿ ಸ್ಫೋಟಕ ಪತ್ತೆ ಕುರಿತು ತರಬೇತಿ ನೀಡಲಾಗಿತ್ತು. ನಂತರ ಅದನ್ನು ಮಂಗಳೂರು ವಿಮಾನ ನಿಲ್ದಾಣ ಶ್ವಾನ ದಳಕ್ಕೆ ಸೇರಿಸಲಾಯಿತು.

2020 ಜನವರಿ 12ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಎಂಬಾತ ಇರಿಸಿದ್ದ ಬಾಂಬ್ ಅನ್ನು ಇದೇ ಲೀನಾ ಪತ್ತೆ ಹಚ್ಚಿತ್ತು. ಮಂಗಳೂರು ವಿಮಾನ ನಿಲ್ದಾಣದ ಶ್ವಾನ ದಳದಲ್ಲಿರುವ 4 ಶ್ವಾನಗಳ ಪೈಕಿ ಲೀನಾ ಅತ್ಯಂತ ಚುರುಕು ಹಾಗೂ ಸೂಕ್ಷ್ಮಗ್ರಾಹಿ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು