8:44 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಮಂಗಳೂರು ಏರ್ ಪೋರ್ಟ್ ಶ್ವಾನ ದಳದ  ಲೀನಾ ಇನ್ನಿಲ್ಲ: ಸಕಲ ಗೌರವದೊಂದಿಗೆ ಅಂತ್ಯಕ್ರಿಯೆ 

22/11/2021, 14:54

ಮಂಗಳೂರು(reporterkarnataka.com): ಇಡೀ ಕಡಲನಗರಿ ಯನ್ನೇ ಒಂದು ದಿನ ಪೂರ್ತಿ ತುದಿಗಾಲಿನಲ್ಲಿ ನಿಲ್ಲಿಸಿದ್ದ ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣವನ್ನು ಬೇಧಿಸಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐ ಎಸ್ ಎಫ್)ಯ ಶ್ವಾನ ಲೀನಾ(8) ಅನಾರೋಗ್ಯದಿಂದ ಕೊನೆಯುಸಿರೆಳೆದಿದೆ. ಸಕಲ ಸೇನಾ ಗೌರವದೊಂದಿಗೆ ಮೃತ ಲೀನಾಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.


ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಲೀನಾಳ ಅಂತ್ಯ ಸಂಸ್ಕಾರ ನಡೆಸಲಾಯಿತು. ಹೂವಿನಿಂದ ಅಲಂಕರಿಸಿದ ಪೆಟ್ಟಿಗೆಯಲ್ಲಿ ಇರಿಸಿ ಲೀನಾಳನ್ನು ತರಲಾಯಿತು.

2013 ಮೇ 5ರಂದು ಜನಿಸಿದ ಲೀನಾಗೆ ರಾಂಚಿಯಲ್ಲಿ ಸ್ಫೋಟಕ ಪತ್ತೆ ಕುರಿತು ತರಬೇತಿ ನೀಡಲಾಗಿತ್ತು. ನಂತರ ಅದನ್ನು ಮಂಗಳೂರು ವಿಮಾನ ನಿಲ್ದಾಣ ಶ್ವಾನ ದಳಕ್ಕೆ ಸೇರಿಸಲಾಯಿತು.

2020 ಜನವರಿ 12ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಎಂಬಾತ ಇರಿಸಿದ್ದ ಬಾಂಬ್ ಅನ್ನು ಇದೇ ಲೀನಾ ಪತ್ತೆ ಹಚ್ಚಿತ್ತು. ಮಂಗಳೂರು ವಿಮಾನ ನಿಲ್ದಾಣದ ಶ್ವಾನ ದಳದಲ್ಲಿರುವ 4 ಶ್ವಾನಗಳ ಪೈಕಿ ಲೀನಾ ಅತ್ಯಂತ ಚುರುಕು ಹಾಗೂ ಸೂಕ್ಷ್ಮಗ್ರಾಹಿ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು