12:12 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪುತ್ತೂರು: ಬಿಜೆಪಿ ಓಬಿಸಿ ಮೋರ್ಚಾ ವತಿಯಿಂದ ಪೌರಕಾರ್ಮಿಕರಿಗೆ ಆಹಾರ ಪೊಟ್ಟಣ ವಿತರಣೆ

30/05/2021, 14:28

ಪುತ್ತೂರು(reporterkarnataka news);

ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಮತ್ತು ಪುತ್ತೂರು ನಗರ ಬಿಜೆಪಿ ಓಬಿಸಿ ಮೋರ್ಚಾ ವತಿಯಿಂದ ಇಂದು ಬೆಳಿಗ್ಗೆ ಪುತ್ತೂರು ನಗರಸಭೆಯ ಪೌರಕಾರ್ಮಿಕರಿಗೆ ಆಹಾರ ಪೊಟ್ಟಣ ಹಾಗೂ ಸಿಹಿತಿನಿಸು ವಿತರಿಸಲಾಯಿತು. 

ಕೇಂದ್ರ ಸರ್ಕಾರದ ಎರಡನೇ ಅವಧಿಯ ಎರಡನೇ ವರ್ಷದ ಆಚರಣೆ ಸಂದರ್ಭದಲ್ಲಿ ‘ಸೇವಾ ಹಿ ಸಂಘಟನ್’ ಕಾರ್ಯಕ್ರಮದಲ್ಲಿ ಕೋವಿಡ್ ಕಾರ್ಯದಲ್ಲಿ ಮುಂಚೂಣಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ಆಹಾರ ಪೊಟ್ಟಣಗಳನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ದೇಶ ಸಂಕಷ್ಟ ಎದುರಿಸುವ ಸಂದರ್ಭದಲ್ಲಿ ನಗರ ಸ್ವಚ್ಛತೆಯ ಹೊಣೆಹೊತ್ತಿರುವ ಪೌರಕಾರ್ಮಿಕರು ನೆಮ್ಮದಿಯಿಂದ ಇರಬೇಕು ಹಾಗೂ ಕೇಂದ್ರ ಸರಕಾರ ನಿರಂತರ ಏಳು ವರ್ಷ ಆಡಳಿತ ನಡೆಸಿ ಜನರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದೆ. ಈ ಸಂದರ್ಭದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸುವ ಓಬಿಸಿ ಮೋರ್ಚಾದ ಕಾರ್ಯ ವೈಖರಿ ಶ್ಲಾಘನೀಯ ಎಂದರು.

ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಸಿ.

ನಾರಾಯಣ್ ಮಾತನಾಡಿ, ದೇಶದ ಸಂಕಷ್ಟ ಸಮಯದಲ್ಲಿ ಜನರ ಆರೋಗ್ಯ ಕಾಪಾಡುವುದರ ಜೊತೆಗೆ ಜನರೊಂದಿಗೆ ಇದ್ದು ‌ ಜನಸೇವೆ ಮಾಡಬೇಕು. ಈ ನಿಟ್ಟಿನಲ್ಲಿ ಬಿಜೆಪಿ ಸೇವಾ ಹಿ ಸಂಘಟನ್ ಹೆಸರಿನಲ್ಲಿ ನಾಲ್ಕು ದಿನಗಳ ಕಾಲ ನಿರಂತರ ಹಲವು ಸೇವಾಕಾರ್ಯವನ್ನು ನಡೆಸಲಿದೆ. ಪ್ರಧಾನಿ ನರೇಂದ್ರ ಮೋದಿ ಸರಕಾರ ದೇಶಕ್ಕೆ ಹೊಸ ದಿಕ್ಕನ್ನು ತೋರಿಸುವ ಮುಖಾಂತರ ಜನಾನುರಾಗಿ ಕೆಲಸ ನಿರ್ವಹಿಸಿದೆ ಎಂದರು. 

ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷರಾದ ವಿದ್ಯಾ ಆರ್. ಗೌರಿ, ಪೂಡಾ ಅಧ್ಯಕ್ಷ ಅಶೋಕ್ ಶೆಣೈ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಶಂಭು ಭಟ್, ಬಿಜೆಪಿ ಪುತ್ತೂರು ನಗರ ಪ್ರಧಾನ ಕಾರ್ಯದರ್ಶಿ ಯುವರಾಜ್,  ಜಯಶ್ರೀ ಶೆಟ್ಟಿ, ನಗರ ಓಬಿಸಿ ಮೋರ್ಚಾ ಅಧ್ಯಕ್ಷ ಶಿವರಾಮ ಸಪಲ್ಯ, ಪ್ರಧಾನ ಕಾರ್ಯದರ್ಶಿಗಳಾದ  ಜಯರಾಮ್ ಪೂಜಾರಿ, ದಿವಾಕರ ಆಚಾರ್ಯ, ನಗರಸಭಾ ಸದಸ್ಯರಾದ ಯಶೋಧ ಪೂಜಾರಿ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಸದಸ್ಯರಾದ ಸಂದೀಪ್ ಲೋಬೋ, ನಗರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಶೆಣೈ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು