8:55 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಕಳಪೆ ಕಾಮಗಾರಿ: ನಿರ್ಮಾಣಗೊಂಡು 3 ತಿಂಗಳಲ್ಲೇ ಮಳೆಗೆ ಕೊಚ್ಚಿ ಹೋದ ಗೋಪಾನಹಳ್ಳಿ ಚೆಕ್ ಡ್ಯಾಮ್!

22/11/2021, 16:23

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸಮೀಪ ಗೊಲ್ಲರ ಕರಿಯಣ್ಣ ತೋಟದ ಬಳಿ ರಾಣೀಕೆರೆಗೆ ನೀರು ಹರಿಯುವ ಗರಣಿ ಹಳ್ಳಕ್ಕೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಿಸಿದ  ಚೆಕ್ ಡ್ಯಾಂ ಕಾಮಗಾರಿ ಪೂರ್ಣಗೊಂಡು ಇನ್ನು ಮೂರು ತಿಂಗಳು ಕಳೆದಿಲ್ಲ ಕಳೆದ 15 ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಸಿಲುಕಿ ಚೆಕ್ ಡ್ಯಾಂ ಗೋಡೆ ಕುಸಿದು ನೀರಲ್ಲಿ ಕೊಚ್ಚಿ ಹೋಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಬರದ ನಾಡಲ್ಲಿ ಅಂತರ್ಜಲ ಹೆಚ್ಚಿಸಲು, ನೀರಿನ ಬವಣೆ ನೀಗಿಸಲು ಹತ್ತಾರು ಯೋಜನೆಗಳನ್ನ ಜಾರಿ ಮಾಡುತ್ತಲೇ ಇದೆ. ಚೆಕ್ ಡ್ಯಾಂ ಗಳ ಮೂಲಕ ನೀರು ನಿಲ್ಲಿಸೋಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ. ಆದ್ರೆ ಗುತ್ತಿಗೆದಾರರು ಹಾಗೂ ಇಂಜಿನಿಯರ್​ಗಳ ಬೇಜವಾಬ್ದಾರಿತನಕ್ಕೆ ಸರ್ಕಾರದ ಲಕ್ಷಾಂತರ ರೂಪಾಯಿ ಹಣ  ಒಂದೆ ಮಳೆಗೆ ಕಿತ್ತು ಹೋಗಿರುವುದರಿಂದ ಕಳಪೆ ಗುಣಮಟ್ಟ ಬಯಲಾಗಿದೆ.    

ಬರದ ಹಣೆಪಟ್ಟಿ ಹೊತ್ತಿರೋ ಚಿತ್ರದುರ್ಗ ಜುಲ್ಲೆಯಲ್ಲಿ ಅಂತರ್ಜಲ ವೃದ್ದಿಗಾಗಿ ಹಾಗೂ ಜಲ ಮರು ಪೂರಣಕ್ಕಾಗಿ ಸರ್ಕಾರ ವಿಶೇಷ ಅನುದಾನ ಬಿಡುಗಡೆಗೊಳಿಸಿ ಈ  ಕಾಮಗಾರಿಯನ್ನ ಸಣ್ಣ ನೀರಾವರಿ ಇಲಾಖೆಗೆ ಹಣ ಬಿಡುಗಡೆ ಮಾಡಿ ಕಾಮಗಾರಿ ನಿರ್ಮಿಸೋಕೆ ಅನುಮೋದನೆ ನೀಡಿದೆ. ಆದರೆ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಗಳ  ನಿರ್ಲಕ್ಷ್ಯದಿಂದ ಗುತ್ತಿಗೆದಾರ ಕಳಪೆ ಕಾಮಾಗಾರಿಯಿಂದಾಗಿ  ಸೂಮಾರು 70 ಲಕ್ಷ ರೂ ವೆಚ್ಚದ ಚೆಕ್ ಡ್ಯಾಂ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಸಾವಿರಾರು  ರೈತರ ಕನಸಿಗೆ ಬರೆ ಎಳೆದಂತಾಗಿದೆ. ಇದರಿಂದ ಆಕ್ರೋಶಗೊಂಡ ರೈತರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಹಾಗೂ ಗುತ್ತಿಗೆದಾರ ವಿರುದ್ದ ಹಿಡಿಶಾಪ ಹಾಕುವ ಮೂಲಕ ಸಂಬಂಧ ಪಟ್ಟ ಅಧಿಕಾರಿ ಹಾಗೂ ಗುತ್ತಿಗೆ ದಾರರ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು