2:05 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕಳಪೆ ಕಾಮಗಾರಿ: ನಿರ್ಮಾಣಗೊಂಡು 3 ತಿಂಗಳಲ್ಲೇ ಮಳೆಗೆ ಕೊಚ್ಚಿ ಹೋದ ಗೋಪಾನಹಳ್ಳಿ ಚೆಕ್ ಡ್ಯಾಮ್!

22/11/2021, 16:23

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸಮೀಪ ಗೊಲ್ಲರ ಕರಿಯಣ್ಣ ತೋಟದ ಬಳಿ ರಾಣೀಕೆರೆಗೆ ನೀರು ಹರಿಯುವ ಗರಣಿ ಹಳ್ಳಕ್ಕೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಿಸಿದ  ಚೆಕ್ ಡ್ಯಾಂ ಕಾಮಗಾರಿ ಪೂರ್ಣಗೊಂಡು ಇನ್ನು ಮೂರು ತಿಂಗಳು ಕಳೆದಿಲ್ಲ ಕಳೆದ 15 ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಸಿಲುಕಿ ಚೆಕ್ ಡ್ಯಾಂ ಗೋಡೆ ಕುಸಿದು ನೀರಲ್ಲಿ ಕೊಚ್ಚಿ ಹೋಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಬರದ ನಾಡಲ್ಲಿ ಅಂತರ್ಜಲ ಹೆಚ್ಚಿಸಲು, ನೀರಿನ ಬವಣೆ ನೀಗಿಸಲು ಹತ್ತಾರು ಯೋಜನೆಗಳನ್ನ ಜಾರಿ ಮಾಡುತ್ತಲೇ ಇದೆ. ಚೆಕ್ ಡ್ಯಾಂ ಗಳ ಮೂಲಕ ನೀರು ನಿಲ್ಲಿಸೋಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ. ಆದ್ರೆ ಗುತ್ತಿಗೆದಾರರು ಹಾಗೂ ಇಂಜಿನಿಯರ್​ಗಳ ಬೇಜವಾಬ್ದಾರಿತನಕ್ಕೆ ಸರ್ಕಾರದ ಲಕ್ಷಾಂತರ ರೂಪಾಯಿ ಹಣ  ಒಂದೆ ಮಳೆಗೆ ಕಿತ್ತು ಹೋಗಿರುವುದರಿಂದ ಕಳಪೆ ಗುಣಮಟ್ಟ ಬಯಲಾಗಿದೆ.    

ಬರದ ಹಣೆಪಟ್ಟಿ ಹೊತ್ತಿರೋ ಚಿತ್ರದುರ್ಗ ಜುಲ್ಲೆಯಲ್ಲಿ ಅಂತರ್ಜಲ ವೃದ್ದಿಗಾಗಿ ಹಾಗೂ ಜಲ ಮರು ಪೂರಣಕ್ಕಾಗಿ ಸರ್ಕಾರ ವಿಶೇಷ ಅನುದಾನ ಬಿಡುಗಡೆಗೊಳಿಸಿ ಈ  ಕಾಮಗಾರಿಯನ್ನ ಸಣ್ಣ ನೀರಾವರಿ ಇಲಾಖೆಗೆ ಹಣ ಬಿಡುಗಡೆ ಮಾಡಿ ಕಾಮಗಾರಿ ನಿರ್ಮಿಸೋಕೆ ಅನುಮೋದನೆ ನೀಡಿದೆ. ಆದರೆ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಗಳ  ನಿರ್ಲಕ್ಷ್ಯದಿಂದ ಗುತ್ತಿಗೆದಾರ ಕಳಪೆ ಕಾಮಾಗಾರಿಯಿಂದಾಗಿ  ಸೂಮಾರು 70 ಲಕ್ಷ ರೂ ವೆಚ್ಚದ ಚೆಕ್ ಡ್ಯಾಂ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಸಾವಿರಾರು  ರೈತರ ಕನಸಿಗೆ ಬರೆ ಎಳೆದಂತಾಗಿದೆ. ಇದರಿಂದ ಆಕ್ರೋಶಗೊಂಡ ರೈತರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಹಾಗೂ ಗುತ್ತಿಗೆದಾರ ವಿರುದ್ದ ಹಿಡಿಶಾಪ ಹಾಕುವ ಮೂಲಕ ಸಂಬಂಧ ಪಟ್ಟ ಅಧಿಕಾರಿ ಹಾಗೂ ಗುತ್ತಿಗೆ ದಾರರ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು