8:59 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಘು ಇಡ್ಕಿದು ಅವರ ‘ನೆತ್ತರು ಮತ್ತು ಮೌನದೊಳಗೊಂದು ಚಿತ್ರ’ ಕವನ ಸಂಕಲನ ಲೋಕಾರ್ಪಣೆ

22/11/2021, 18:19

ಮಂಗಳೂರು (reporterkarnataka.com)

ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಹಾಗೂ ವಿದ್ಯಾ ಪ್ರಕಾಶನ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ರಘು ಇಡ್ಕಿದು ಅವರ 24ನೇ ಕೃತಿ ನೆತ್ತರು ಮತ್ತು ಮೌನದೊಳಗೊಂದು ಚಿತ್ರ ಕವನ ಸಂಕಲನದ ಬಿಡುಗಡೆ ಸಮಾರಂಭ ಸೋಮವಾರ ಡಾನ್ ಬಾಸ್ಕೊ ಹಾಲ್‌ನಲ್ಲಿ ನಡೆಯಿತು.

ಸಂಶೋಧಕ, ವಿಮರ್ಶಕ, ಕವಿಗಳಾದ ಡಾ.ರಾಧಾಕೃಷ್ಣ ಎನ್.ಬೆಳ್ಳೂರು ಕೃತಿ ಬಿಡುಗಡೆಗೊಳಿಸಿದರು. ಹಿರಿಯ ಕವಿ ರಾಧಾಕೃಷ್ಣ ಉಳಿಯತಡ್ಕ ಅಧ್ಯಕ್ಷತೆ ವಹಿಸಿದ್ದರು. ಸುರತ್ಕಲ್ ಗೋವಿಂದಾಸ ಕಾಲೇಜ್‌ನ ಪ್ರಿನ್ಸಿಪಾಲರಾದ ಪ್ರೊ.ಪಿ.ಕೃಷ್ಣಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕಾ.ವಿ.ಕೃಷ್ಣದಾಸ್ ಉಪಸ್ಥಿತರಿದ್ದರು.

ಶೈಲಜಾ ಪುದುಕೋಳಿ, ಯೋಗೀಶ್ ಮಲ್ಲಿಗೆ ಮಾಡು, ಡೊಂಬಯ್ಯ ಇಡ್ಕಿದು ಕವನ ವಾಚನ ಮಾಡಿ ಪ್ರತಿಕ್ರಿಯೆ ನೀಡಿದರು.

ವಿಜಯಲಕ್ಷ್ಮೀ ಕಟೀಲು ಕಾರ್ಯಕ್ರಮ ನಿರೂಪಿಸಿದರು. ಸುಬ್ರಾಯ ಭಟ್ ಸ್ವಾಗತಿಸಿ ಲತೀಶ್ ಸಂಕೊಳಿಗೆ ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು