7:03 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ವಿದ್ಯಾಭ್ಯಾಸದ ಜತೆಗೆ ಮಕ್ಕಳ ಹವ್ಯಾಸ ಗುರುತಿಸಿ ಸೃಜನಶೀಲತೆಗೆ ವೇದಿಕೆ ಕಲ್ಪಿಸುವ ಅಗತ್ಯವಿದೆ: ಡಾ. ಶೆಟ್ಟಿಗಾರ್

23/11/2021, 09:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಜೊತೆಗೆ ಅವರ ಹವ್ಯಾಸಗಳನ್ನು ಗುರುತಿಸಿ ಮಕ್ಕಳ ಸೃಜನಶೀಲತೆಗೆ ವೇದಿಕೆ ಕಲ್ಪಿಸುವ ಅಗತ್ಯವಿದೆ ಎಂದು ಡಾ.ಎಸ್.ಪಿ. ಪದ್ಮಾನಾಭ್ ಶೆಟ್ಟಿಗಾರ್ ಹೇಳಿದರು.

ಬಣಕಲ್‌ನಲ್ಲಿ ಸೋಮವಾರ ಸ್ಯಾಷ್ ದಿ ಸ್ಟೆöಟಿಲ್ ಡ್ಯಾನ್ಸ್ ಕ್ಲಾಸ್ ಅಂಡ್ ಎಎಸ್‌ಎನ್ ಮ್ಯೂಸಿಕ್ ಸ್ಟುಡಿಯೋ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು, ನೃತ್ಯ, ಸಂಗೀತ ಮುಂತಾದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಾಗವರ ವ್ಯಕ್ತಿತ್ವ ಸೃಜನಾತ್ಮಕವಾಗಿ ರೂಪುಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಪೋಷಕರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕಿದೆ ಎಂದರು.

ಜೆಸಿಐ ನೂತನ ಅಧ್ಯಕ್ಷರಾದ ವಿದ್ಯಾರಾಜು ಮಾತನಾಡಿ, ಮಕ್ಕಳು ನೃತ್ಯ ಮುಂತಾದ ಕಲಾ ಪ್ರಕಾರಗಳಲ್ಲಿ ತೊಡಗಿಕೊಂಡಾಗ ಅಪಾರ ಆತ್ಮವಿಶ್ವಾಸವನ್ನು ಪಡೆಯುವ ಜೊತೆಗೆ ಲವಲವಿಕೆಯಿಂದ ಇರುತ್ತಾರೆ. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೃತ್ಯ ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ನೃತ್ಯಶಾಲೆಯ ಶಿಕ್ಷಕ ಅಜಿತ್ ಕೆವಿಯಾರ್, ಬಿಎಸ್‌ಪಿ ಮುಖಂಡರಾದ ಜಾಕೀರ್ ಹುಸೇನ್, ಶ್ರೀಕಾಂತ್,ಮಾಸ್ಟರ್ ಪ್ರಸಾದ್ ಅಮೀನ್, ಪಿಡಿಓ ಯತೀಶ್, ಗಾಯಕ ರವೀಂದ್ರ ಬಕ್ಕಿ, ವಿರೂಪಾಕ್ಷ, ಜಯಪ್ರಕಾಶ್ ಕಡುವಳ್ಳಿ, ಬಣಕಲ್ ಕಸಾಪ ಪೂರ್ವಾದ್ಯಕ್ಷ ವಸಂತ್ ಹಾರ್‌ಗೋಡು,  ಶಿಕ್ಷಕರಾದ ನಾಗರಾಜ್, ಲಿಂಗರಾಜ್, ಭಕ್ತೇಶ್, ನಿರೂಪಕರಾದ ಶಂಕರ್, ಎಂ.ಎಸ್.ನಾಗರಾಜ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು