8:27 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ವಿದ್ಯಾಭ್ಯಾಸದ ಜತೆಗೆ ಮಕ್ಕಳ ಹವ್ಯಾಸ ಗುರುತಿಸಿ ಸೃಜನಶೀಲತೆಗೆ ವೇದಿಕೆ ಕಲ್ಪಿಸುವ ಅಗತ್ಯವಿದೆ: ಡಾ. ಶೆಟ್ಟಿಗಾರ್

23/11/2021, 09:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಜೊತೆಗೆ ಅವರ ಹವ್ಯಾಸಗಳನ್ನು ಗುರುತಿಸಿ ಮಕ್ಕಳ ಸೃಜನಶೀಲತೆಗೆ ವೇದಿಕೆ ಕಲ್ಪಿಸುವ ಅಗತ್ಯವಿದೆ ಎಂದು ಡಾ.ಎಸ್.ಪಿ. ಪದ್ಮಾನಾಭ್ ಶೆಟ್ಟಿಗಾರ್ ಹೇಳಿದರು.

ಬಣಕಲ್‌ನಲ್ಲಿ ಸೋಮವಾರ ಸ್ಯಾಷ್ ದಿ ಸ್ಟೆöಟಿಲ್ ಡ್ಯಾನ್ಸ್ ಕ್ಲಾಸ್ ಅಂಡ್ ಎಎಸ್‌ಎನ್ ಮ್ಯೂಸಿಕ್ ಸ್ಟುಡಿಯೋ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು, ನೃತ್ಯ, ಸಂಗೀತ ಮುಂತಾದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಾಗವರ ವ್ಯಕ್ತಿತ್ವ ಸೃಜನಾತ್ಮಕವಾಗಿ ರೂಪುಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಪೋಷಕರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕಿದೆ ಎಂದರು.

ಜೆಸಿಐ ನೂತನ ಅಧ್ಯಕ್ಷರಾದ ವಿದ್ಯಾರಾಜು ಮಾತನಾಡಿ, ಮಕ್ಕಳು ನೃತ್ಯ ಮುಂತಾದ ಕಲಾ ಪ್ರಕಾರಗಳಲ್ಲಿ ತೊಡಗಿಕೊಂಡಾಗ ಅಪಾರ ಆತ್ಮವಿಶ್ವಾಸವನ್ನು ಪಡೆಯುವ ಜೊತೆಗೆ ಲವಲವಿಕೆಯಿಂದ ಇರುತ್ತಾರೆ. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೃತ್ಯ ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ನೃತ್ಯಶಾಲೆಯ ಶಿಕ್ಷಕ ಅಜಿತ್ ಕೆವಿಯಾರ್, ಬಿಎಸ್‌ಪಿ ಮುಖಂಡರಾದ ಜಾಕೀರ್ ಹುಸೇನ್, ಶ್ರೀಕಾಂತ್,ಮಾಸ್ಟರ್ ಪ್ರಸಾದ್ ಅಮೀನ್, ಪಿಡಿಓ ಯತೀಶ್, ಗಾಯಕ ರವೀಂದ್ರ ಬಕ್ಕಿ, ವಿರೂಪಾಕ್ಷ, ಜಯಪ್ರಕಾಶ್ ಕಡುವಳ್ಳಿ, ಬಣಕಲ್ ಕಸಾಪ ಪೂರ್ವಾದ್ಯಕ್ಷ ವಸಂತ್ ಹಾರ್‌ಗೋಡು,  ಶಿಕ್ಷಕರಾದ ನಾಗರಾಜ್, ಲಿಂಗರಾಜ್, ಭಕ್ತೇಶ್, ನಿರೂಪಕರಾದ ಶಂಕರ್, ಎಂ.ಎಸ್.ನಾಗರಾಜ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು