5:36 AM Thursday9 - May 2024
ಬ್ರೇಕಿಂಗ್ ನ್ಯೂಸ್
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ…

ಇತ್ತೀಚಿನ ಸುದ್ದಿ

ಕನಕದಾಸರು ಕನ್ನಡದಲ್ಲಿ ಸಾಹಿತ್ಯ ರಚಿಸುವ ಮೂಲಕ ವೈಚಾರಿಕ ಸಂಗತಿಗಳನ್ನು ಆಧ್ಯಾತ್ಮಿಕ ನೆಲೆಯಲ್ಲಿ ಬಿತ್ತಿದ ಮಹಾನ್ ಚೇತನ 

23/11/2021, 10:09

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಜನಸಾಮಾನ್ಯರ ಆಡು ಭಾಷೆಯಾದ ಕನ್ನಡದಲ್ಲಿ ಸಾಹಿತ್ಯ ರಚಿಸುವ ಮೂಲಕ ಸಮಾಜದಲ್ಲಿನ ವೈಚಾರಿಕ ಸಂಗತಿಗಳನ್ನು, ಆಧ್ಯಾತ್ಮಿಕ ನೆಲೆಯಲ್ಲಿ ಬಿತ್ತುವ ಮೂಲಕ ವ್ಯಕ್ತಿಯ ಅಂತರಂಗವನ್ನು ಶುದ್ದೀಕರಿಸುವ ಜೊತೆಗೆ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿದ ಮಹಾನ್ ಚೇತನ ಕನಕದಾಸರು ಎಂಬುದಾಗಿ ತಾಪಂ ಇಒ ಮಡಗಿನ ಬಸಪ್ಪ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಭಕ್ತ ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 
ಕನಕದಾಸರ ಕೀರ್ತನೆಗಳು ಸಮಾಜದ ಮೇಲುಕೀಳೆಂಬ ಭಾವನೆಗಳನ್ನು ಹೋಗಲಾಡಿಸಿ ಸಾಮಾಜಿಕ ನ್ಯಾಯದಡಿ, ಶೋಷಿತರ ವರ್ಗದ ಎಲ್ಲ ಜನರಿಗೂ ಸಮಾಜದಲ್ಲಿ ತಲೆಎತ್ತಿ ಬದುಕುವಂತೆ ಮಾಡಿದ ಕೀರ್ತಿ ಕನಕದಾಸರಿಗೆ ಸಲ್ಲಬೇಕಾಗುತ್ತದೆ ಎಂದರಲ್ಲದೆ ಜಾತಿ ಮತ್ತು ವರ್ಗ ಪದ್ದತಿ ವಿರುದ್ಧ ಕನಕದಾಸರು ನಡೆಸಿದ ಆಂದೋಲನಕ್ಕೆ ವಿಶ್ವ ಮಾನ್ಯತೆ ಸಿಗಬೇಕಿದೆ ಎಂಬುದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು