9:58 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ: ಡಾ. ಸುಧಾ ಎ.ಆರ್. ಅಭಿಮತ

23/11/2021, 10:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ ವಿಶೇಷವಾಗಿದೆ ಎಂದು ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಸುಧಾ ಎ.ಆರ್.ಹೇಳಿದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಹುಲಿಯೂರಿನ ಸರಹದ್ದು ಕೃತಿಯ ಬಗ್ಗೆ ಮಾತನಾಡಿದರು.

ಹುಲಿಯೂರಿನ ಸರಹದ್ದು ಕೃತಿಯಲ್ಲಿನ ಕಥೆಗಳು ಹಲವು ದಶಕಗಳ ಹಿಂದೆ ಬರೆದ ಕಥೆಗಳಾಗಿದ್ದರೂ ಕೂಡ ಈ ಕಥೆಗಳ ವಿಚಾರಗಳು ಇಂದಿಗೂ ಪ್ರಸ್ತುತವಾಗಿದೆ. ವಿಭಿನ್ನ ಕಥಾವಸ್ತುವಿನ ಮೂಲಕ ಸಮಾಜವನ್ನು ತಿದ್ದುವ ವಿಚಾರಗಳೊಂದಿಗೆ ಈ ಕೃತಿಗಳ ಕಥೆಗಳು ಒಡಮೂಡಿವೆ ಎಂದರು.

ಅಪ್ಪಟ ಸಂಶೋಧಕನಾಗಿ, ಅನ್ವೇಷಕನಾಗಿ, ಲೇಖಕನಾಗಿ ಹಲವಾರು ಹೊಸತುಗಳಿಗೆ, ಮೊದಲುಗಳಿಗೆ ಕಾರಣರಾದವರು ತೇಜಸ್ವಿ ಅವರು. ಯುವ ಪೀಳಿಗೆಯ ಮೇಲೆ ತೇಜಸ್ವಿ ಅವರ ಪ್ರಭಾವ ಅಪಾರ. ಬದುಕಿದಂತೆ ಬರೆದ, ಬರೆದಂತೆ ಬದುಕಿದ ತೇಜಸ್ವಿ ತಮ್ಮ ಕೃತಿಗಳ ಮೂಲಕ ಜನರಿಗೆ ಹತ್ತಿರವಾದಂತೆ ತಮ್ಮ ವ್ಯಕ್ತಿತ್ವದ ಮೂಲಕವೂ ಜನಮನಕ್ಕೆ ಆಪ್ತರಾದವರು ಎಂದರು.

ಈ ಸಂದರ್ಭದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಲೇಖಕ ಪೂರ್ಣೆಶ್ ಮತ್ತಾವರ, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು