8:01 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ: ಡಾ. ಸುಧಾ ಎ.ಆರ್. ಅಭಿಮತ

23/11/2021, 10:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ ವಿಶೇಷವಾಗಿದೆ ಎಂದು ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಸುಧಾ ಎ.ಆರ್.ಹೇಳಿದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಹುಲಿಯೂರಿನ ಸರಹದ್ದು ಕೃತಿಯ ಬಗ್ಗೆ ಮಾತನಾಡಿದರು.

ಹುಲಿಯೂರಿನ ಸರಹದ್ದು ಕೃತಿಯಲ್ಲಿನ ಕಥೆಗಳು ಹಲವು ದಶಕಗಳ ಹಿಂದೆ ಬರೆದ ಕಥೆಗಳಾಗಿದ್ದರೂ ಕೂಡ ಈ ಕಥೆಗಳ ವಿಚಾರಗಳು ಇಂದಿಗೂ ಪ್ರಸ್ತುತವಾಗಿದೆ. ವಿಭಿನ್ನ ಕಥಾವಸ್ತುವಿನ ಮೂಲಕ ಸಮಾಜವನ್ನು ತಿದ್ದುವ ವಿಚಾರಗಳೊಂದಿಗೆ ಈ ಕೃತಿಗಳ ಕಥೆಗಳು ಒಡಮೂಡಿವೆ ಎಂದರು.

ಅಪ್ಪಟ ಸಂಶೋಧಕನಾಗಿ, ಅನ್ವೇಷಕನಾಗಿ, ಲೇಖಕನಾಗಿ ಹಲವಾರು ಹೊಸತುಗಳಿಗೆ, ಮೊದಲುಗಳಿಗೆ ಕಾರಣರಾದವರು ತೇಜಸ್ವಿ ಅವರು. ಯುವ ಪೀಳಿಗೆಯ ಮೇಲೆ ತೇಜಸ್ವಿ ಅವರ ಪ್ರಭಾವ ಅಪಾರ. ಬದುಕಿದಂತೆ ಬರೆದ, ಬರೆದಂತೆ ಬದುಕಿದ ತೇಜಸ್ವಿ ತಮ್ಮ ಕೃತಿಗಳ ಮೂಲಕ ಜನರಿಗೆ ಹತ್ತಿರವಾದಂತೆ ತಮ್ಮ ವ್ಯಕ್ತಿತ್ವದ ಮೂಲಕವೂ ಜನಮನಕ್ಕೆ ಆಪ್ತರಾದವರು ಎಂದರು.

ಈ ಸಂದರ್ಭದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಲೇಖಕ ಪೂರ್ಣೆಶ್ ಮತ್ತಾವರ, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು