2:13 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ: ಡಾ. ಸುಧಾ ಎ.ಆರ್. ಅಭಿಮತ

23/11/2021, 10:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ ವಿಶೇಷವಾಗಿದೆ ಎಂದು ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಸುಧಾ ಎ.ಆರ್.ಹೇಳಿದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಹುಲಿಯೂರಿನ ಸರಹದ್ದು ಕೃತಿಯ ಬಗ್ಗೆ ಮಾತನಾಡಿದರು.

ಹುಲಿಯೂರಿನ ಸರಹದ್ದು ಕೃತಿಯಲ್ಲಿನ ಕಥೆಗಳು ಹಲವು ದಶಕಗಳ ಹಿಂದೆ ಬರೆದ ಕಥೆಗಳಾಗಿದ್ದರೂ ಕೂಡ ಈ ಕಥೆಗಳ ವಿಚಾರಗಳು ಇಂದಿಗೂ ಪ್ರಸ್ತುತವಾಗಿದೆ. ವಿಭಿನ್ನ ಕಥಾವಸ್ತುವಿನ ಮೂಲಕ ಸಮಾಜವನ್ನು ತಿದ್ದುವ ವಿಚಾರಗಳೊಂದಿಗೆ ಈ ಕೃತಿಗಳ ಕಥೆಗಳು ಒಡಮೂಡಿವೆ ಎಂದರು.

ಅಪ್ಪಟ ಸಂಶೋಧಕನಾಗಿ, ಅನ್ವೇಷಕನಾಗಿ, ಲೇಖಕನಾಗಿ ಹಲವಾರು ಹೊಸತುಗಳಿಗೆ, ಮೊದಲುಗಳಿಗೆ ಕಾರಣರಾದವರು ತೇಜಸ್ವಿ ಅವರು. ಯುವ ಪೀಳಿಗೆಯ ಮೇಲೆ ತೇಜಸ್ವಿ ಅವರ ಪ್ರಭಾವ ಅಪಾರ. ಬದುಕಿದಂತೆ ಬರೆದ, ಬರೆದಂತೆ ಬದುಕಿದ ತೇಜಸ್ವಿ ತಮ್ಮ ಕೃತಿಗಳ ಮೂಲಕ ಜನರಿಗೆ ಹತ್ತಿರವಾದಂತೆ ತಮ್ಮ ವ್ಯಕ್ತಿತ್ವದ ಮೂಲಕವೂ ಜನಮನಕ್ಕೆ ಆಪ್ತರಾದವರು ಎಂದರು.

ಈ ಸಂದರ್ಭದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಲೇಖಕ ಪೂರ್ಣೆಶ್ ಮತ್ತಾವರ, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು